ತಲೆದಂಡ

Author : ದ.ರಾ. ಬೇಂದ್ರೆ (ಅಂಬಿಕಾತನಯದತ್ತ)

Pages 336

₹ 60.00




Year of Publication: 2008
Published by: ಶ್ರೀಮಾತಾ ಪ್ರಕಾಶನ
Address: ವಿಶ್ವಶ್ರಮ ಚೇತನ, ಹುಬ್ಬಳ್ಳಿ-580 003

Synopsys

ಬಸವಣ್ಣನವರ ಕೊನೆಯ ದಿನಗಳನ್ನು ಕುರಿತು ಬರೆದ ನಾಟಕ ತಲೆದಂಡ. ಬೇಂದ್ರೆಯವರು ಈ ನಾಟಕಕ್ಕಾಗಿ ಯೋಜನೆ ಹಾಕಿ ಅದಕ್ಕಾಗಿ ಗೀತೆಗಳನ್ನೂ ರಚಿಸಿದ್ದರು. ಆದರೆ, ನಾಟಕ ಪೂರ್ಣಗೊಳ್ಳಲಿಲ್ಲ. ವಾಮನ ಬೇಂದ್ರೆಯವರು ಹಸ್ತಪ್ರತಿಯನ್ನು ಸಂಗ್ರಹಿಸಿ ನಾಟಕ ಪ್ರಕಟಿಸಿದ್ದಾರೆ. ಇದೇ ಹೆಸರಿನ ನಾಟಕ ರಚನೆಗೆ ಗಿರೀಶ್ ಕಾರ್ನಾಡ್ ಅವರಿಗೆ ಈ ನಾಟಕವೇ ಪ್ರೇರಣೆ.

About the Author

ದ.ರಾ. ಬೇಂದ್ರೆ (ಅಂಬಿಕಾತನಯದತ್ತ)
(31 January 1896 - 26 October 1981)

ಕನ್ನಡ ಕಾವ್ಯದ ಸೊಬಗು-ಸೊಗಸು ಹೆಚ್ಚಿಸಿದ ‘ಅಂಬಿಕಾತನಯದತ್ತ’ ಕಾವ್ಯನಾಮದ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರನ್ನು ‘ವರಕವಿ’, ‘ಗಾರುಡಿಗ’ ಎಂದು ಗುರುತಿಸಲಾಗುತ್ತದೆ. ತಂದೆ ರಾಮಚಂದ್ರ ತಾಯಿ ಅಂಬವ್ವ. ಧಾರವಾಡದಲ್ಲಿ 1896ರ ಜನವರಿ 31ರಂದು ಜನಿಸಿದರು. ಧಾರವಾಡದಲ್ಲಿ ಮೆಟ್ರಿಕ್ (1913) ಮುಗಿಸಿದ ಮೇಲೆ ಪುಣೆಯ ಫರ್ಗ್ಯುಸನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಬಿ.ಎ. (1918) ಪದವಿ ಪಡೆದರು. ಕೆಲವು ಕಾಲ ಅಧ್ಯಾಪಕ ವೃತ್ತಿ ಮಾಡಿದ ಮೇಲೆ ಮುಂಬಯಿ ವಿಶ್ವವಿದ್ಯಾನಿಲಯದಿಂದ ಎಂ.ಎ. (1935) ಪದವಿ ಪೂರ್ಣಗೊಳಿಸಿದರು. ಗದುಗಿನ ವಿದ್ಯಾದಾನ ಸಮಿತಿ ಪ್ರೌಢಶಾಲೆಯಲ್ಲಿ ಹೆಡ್ ಮಾಸ್ಟರ್ ಆಗಿ ವೃತ್ತಿ ಆರಂಭಿಸಿದ ಅವರು ನಂತರ ಹುಬ್ಬಳ್ಳಿಯ ನ್ಯೂ ...

READ MORE

Related Books