‘ತಾವರೆಯ ಕೊಳ’ ಕನ್ನಡದ ಖ್ಯಾತ ಕಾದಂಬರಿಗಾರ್ತಿ ತ್ರಿವೇಣಿ ಅವರ ಜನಪ್ರಿಯ ಕಾದಂಬರಿಗಳಲ್ಲೊಂದು. ಮನುಷ್ಯನ ಬದುಕು ಕೇವಲ ಅನ್ನ, ನೀರು, ಗಾಳಿಯಿಂದ ಮಾತ್ರ ಪೂರ್ಣವಾಗುವುದಿಲ್ಲ, ಜೀವನ ಹಸನಾಗಲು ಪ್ರೀತಿ, ವಿಶ್ವಾಸ, ನಂಬಿಕೆ, ಕಾಳಜಿಗಳ ಅಗತ್ಯವಿದೆ ಎಂಬ ಗಂಭೀರ ವಿಚಾರವನ್ನು ಸರಳವಾಗಿ ಮತ್ತು ಸುಂದರವಾಗಿ ನಿರೂಪಿತವಾಗಿರುವ ಕಾದಂಬರಿ ಇದು.
ಮನಸ್ಸಿನ ಕ್ರಿಯೆಗಳಿಗೆ ಕಥಾರೂಪ ನೀಡಿ ಕಾದಂಬರಿಗಳನ್ನು ರಚಿಸಿದ್ದು ತ್ರಿವೇಣಿ ಅವರ ಹೆಗ್ಗಳಿಕೆ. ಇವರು 1928 ರ ಸೆಪ್ಟಂಬರ್ 1 ರಂದು ಮೈಸೂರಿನಲ್ಲಿ ಜನಿಸಿದರು. ಮನಸ್ಸಿನ ಭಾವನೆಗಳನ್ನೂ ಚಿತ್ರಿಸಿ ಬರೆದ ಇವರು ರಚಿಸಿದ ಪ್ರಮುಖ ಕಾದಂಬರಿಗಳೆಂದರೆ- ಹೂವು ಹಣ್ಣು, ಅಪಸ್ವರ, ಅಪಜಯ, ಸೋತುಗೆದ್ದವಳು, ಬೆಕ್ಕಿನಕಣ್ಣು, ಶರಪಂಜರ, ದೂರದ ಬೆಟ್ಟ, ಅಪಜಯ, ಕಂಕಣ, ಮುಚ್ಚಿದ ಬಾಗಿಲು, ಬಾನು ಬೆಳಗಿತು, ಅವಳ ಮನೆ, ವಸಂತಗಾನದಿಂದ ಹಿಡಿದು ಬೆಳ್ಳಿಮೋಡದವರೆಗೆ ಸುಮಾರು 20 ಕಾದಂಬರಿಗಳನ್ನು ಹಾಗೂ 3 ಕತಾ ಸಂಕಲನಗಳನ್ನು ರಚಿಸಿದ್ದಾರೆ. ಇವರ ಬೆಳ್ಳಿಮೋಡ, ಶರಪಂಜರ, ಹಣ್ಣಲೆ ಚಿಗುರಿದಾಗ ಕಾದಂಬರಿಗಳು ಚಲನಚಿತ್ರವಾಗಿಯೂ ಅಪಾರ ಜನಮನ್ನಣೆ ಗಳಿಸಿವೆ. ಇವರಿಗೆ ಕರ್ನಾಟಕ ರಾಜ್ಯಪ್ರಶಸ್ತಿ – 'ಅವಳ ಮನೆ' ...
READ MORE