ತಾಯಿ ಕಾವೇರಿಗೆ ನಮನ

Author : ಕಿಗ್ಗಾಲು. ಎಸ್. ಗಿರೀಶ್

Pages 96

₹ 100.00




Year of Publication: 2021

Synopsys

ಲೇಖಕ ಕಿಗ್ಗಾಲು. ಎಸ್. ಗಿರೀಶ್ ಅವರ ಎಂಟನೆಯ ಕೃತಿ ತಾಯಿ ಕಾವೇರಿಗೆ ನಮನ. ಇದು ಭಾಮಿನೀಷಟ್ಪದಿಯಲ್ಲಿದ್ದು ಕಾವೇರಿ ನದಿಯನ್ನು ದೇವತೆ ಎಂದು ಭಾವಿಸಿ,ರಚಿಸಲಾಗಿದೆ. ಈ ಸಂಕಲನದಲ್ಲಿ ಒಟ್ಟು 365 ರಚನೆಗಳಿವೆ.

About the Author

ಕಿಗ್ಗಾಲು. ಎಸ್. ಗಿರೀಶ್
(24 December 1951)

ಕೊಡಗು ಜಿಲ್ಲೆಯ ಕಿಗ್ಗಾಲು ಗ್ರಾಮದ ನಿವಾಸಿ ಕಿಗ್ಗಾಲು ಗಿರೀಶ್ ರವರು 1951ರ ಡಿಸೆಂಬರ್ 24 ರಂದು ಶ್ರೀನಿವಾಸ ರಾಜಲಕ್ಷ್ಮಿ ಹವ್ಯಕದಂಪತಿಗಳ ದ್ವಿತೀಯ ಪುತ್ರನಾಗಿ ಕಿಗ್ಗಾಲುವಿನಲ್ಲಿ ಜನಿಸಿದರು. ಮೂರ್ನಾಡುವಿನಲ್ಲಿ ಪ್ರಾಥಮಿಕ ಹಾಗೂ ಪ್ರೌಡಶಿಕ್ಷಣವನ್ನು ಪಡೆದ ಇವರು ಮಡಿಕೇರಿಯ ಅಂದಿನ ಸರಕಾರೀ ಕಾಲೇಜಿನಲ್ಲಿ ಬಿ.ಎಸ್ ಸಿ ಪದವಿಯನ್ನು ಗಳಿಸಿದರು.ಅನಂತರ,ಭಾರತೀಯ ವಾಯುಪಡೆಗೆ ಆಯ್ಕೆಯಾಗಿ,ಗುಜರಾತಿನ ಭುಜ್ ಪಟ್ಟಣದಲ್ಲಿ ವಾಯುಸೇನಾ ಕರ್ತವ್ಯಕ್ಕಿಳಿದರು. ವಿದ್ಯಾರ್ಥಿಯಾಗಿರುವಾಗಲೇ ಸುಧಾ,ಪ್ರಜಾವಾಣಿ ಮುಂತಾದ ನಿಯತಕಾಲಿಕಗಳಿಗೆ ಬರೆಹಗಳನ್ನು ನೀಡುತ್ತಿದ್ದ ಇವರು ವಾಯುಪಡೆಯಲ್ಲಿಯೂ ಲೇಖನಗಳನ್ನು ಬರೆಯುತ್ತಿದ್ದರು.ಆಗ್ರಾ ವಿಶ್ವವಿದ್ಯಾನಿಲಯದಲ್ಲಿ ಆಂಗ್ಲಭಾಷೆಯಲ್ಲಿ ಎಮ್ ಏ ಪದವಿ ಗಳಿಸಿ,ಹದಿನೇಳು ವರ್ಷ ಸೇವೆಮಾಡಿ ಅನಂತರ ಸೇನೆಯಿಂದ ನಿವೃತರಾದರು. ಮಡಿಕೇರಿ ಆಕಾಶವಾಣಿಯಲ್ಲಿ ...

READ MORE

Related Books