ತಾಯಿ ಸತ್ತ ಮಗ ಮತ್ತು ಇತರ ನಾಟಕಗಳು

Author : ಸುಭಾಶ್ಚಂದ್ರ ಕಶೆಟ್ಟಿ ಬಾಚನಾಳ

Pages 308

₹ 280.00




Year of Publication: 2021
Published by: ಬಸವ ಪ್ರಕಾಶನ
Address: ಮುಖ್ಯರಸ್ತೆ, ಸೂಪರ್ ಮಾರ್ಕೆಟ್, ಕಲಬುರಗಿ-585101

Synopsys

ಲೇಖಕ ಸುಭಾಶ್ಚಂದ್ರ ಕಶೆಟ್ಟಿ ಅವರ ಸಾಮಾಜಿಕ ನಾಟಕಗಳ ಕೃತಿ-ತಾಯಿ ಸತ್ತ ಮಗ ಮತ್ತು ಇತರ ನಾಟಕಗಳು. ತಾಯಿ ಸತ್ತ ಮಗ, ಧರ್ಮದ ದಹನ, ಸಹವಾಸ ಫಲ, ಜೀವನಚಕ್ರ, ಎನ್ನುವ ಒಟ್ಟು ನಾಲ್ಕು ನಾಟಕಗಳಿದ್ದು. ಗ್ರಾಮೀಣ ಪ್ರದೇಶದ ಕೌಟುಂಬಿಕವಾದ ಜ್ವಲಂತ ಸಮಸ್ಯೆಗಳು ಈ ಎಲ್ಲ ನಾಟಕಗಳ ವಸ್ತು. ಗ್ರಾಮೀಣ ಸರಳ ಭಾಷೆ, ಆದರ್ಶ ಪಾತ್ರಗಳು, ನೀತಿ ಬೋಧನೆಯ ಈ ನಾಟಕಗಳಲ್ಲಿ ಹಾಡು, ಹಾಸ್ಯ, ಗಂಭೀರ ಚಿಂತನೆಯು ಮಡುಗಟ್ಟಿದೆ.

About the Author

ಸುಭಾಶ್ಚಂದ್ರ ಕಶೆಟ್ಟಿ ಬಾಚನಾಳ
(04 July 1948)

ಲೇಖಕ ಸುಭಾಶ್ಚಂದ್ರ ಕಶೆಟ್ಟಿ ಬಾಚನಾಳ ಅವರು ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಬಾಚನಾಳ ಗ್ರಾಮದವರು. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಕಮಲಾಪುರದಲ್ಲಿ ಪಿಯುಸಿ, ಕಲಬುರಗಿಯಲ್ಲಿ ಪದವಿ ಶಿಕ್ಷಣ ಪೂರೈಸಿದರು. ಸರ್ಕಾರದ ವಿವಿಧ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ನಂತರ ಕಂದಾಯ ಇಲಾಖೆಯಲ್ಲಿ ಶಿರಸ್ತೇದಾರರಾಗಿ (2006) ನಿವೃತ್ತರಾದರು.  ಕಮಲಾಪುರ ಸುತ್ತಮುತ್ತಲಿನ ಸಾಧು-ಸಂತರ ಬಗ್ಗೆ, ಜಾನಪದ,ವಚನ ಸಾಹಿತ್ಯ,ನಾಟಕ, ಕವನ, ಜೀವನ ಚರಿತ್ರೆ,ಕುರಿತು 30ಕ್ಕಿಂತ ಹೆಚ್ಚು ಕೃತಿಯನ್ನು ರಚಿಸಿದ್ದಾರೆ. ಕೃತಿಗಳು: ಬದುಕಿನ ಪ್ರಜ್ಞೆ, ಕಾನನದ ಹೂಗಳು, ಸುಗಂಧ ಪುಷ್ಪಗಳು, ಸುಮಂಗಲ ಗೀತೆಗಳು (ಸಂ) ಜೇನುಹನಿ (ಕವನ ಸಂಕಲನ), ನಿತ್ಯಸತ್ಯ (ಚಿಂತನಗಳು), ಜನಮೆಚ್ಚಿದ ನಾಯಕ ಶ್ರೀ ಶಂಕರಶೆಟ್ಟಿ ಪಾಟೀಲರು ...

READ MORE

Related Books