ತೆರೆದ ದಾರಿ

Author : ಜಿ.ಎಸ್. ಶಿವರುದ್ರಪ್ಪ

Pages 80

₹ 48.00




Year of Publication: 2013
Published by: ಸಾಹಿತ್ಯ ಭಂಡಾರ
Address: ಜಂಗಮ ಮೇಸ್ತ್ರಿಗಲ್ಲಿ, ಬಳೇಪೇಟೆ, ಬೆಂಗಳೂರು-560053

Synopsys

ಸಾಮಗಾನ, ಚೆಲುವು-ಒಲವು, ದೇವಶಿಲ್ಪ, ದೀಪದ ಹೆಜ್ಜೆ, ಅನಾವರಣ, ಗೋಡೆ, ಕಾರ್ತೀಕ, ಪ್ರೀತಿ ಇಲ್ಲದ ಮೇಲೆ, ಹೀಗೆ ಅವರ 13 ಕ್ಕೂ ಹೆಚ್ಚು ಕವನ ಸಂಕಲನಗಳು ಪ್ರಕಟಿಸಿರುವ ಕವಿ ಜಿ.ಎಸ್. ಶಿವರುದ್ರಪ್ಪನವರ ಮತ್ತೊಂದು ಕವನ ಸಂಕಲನ-ತೆರೆದ ದಾರಿ. ಇವರ ಕಾವ್ಯಗಳಲ್ಲಿ ಪ್ರಕೃತಿ-ಅಧ್ಯಾತ್ಮ, ಒಲುವು-ಚೆಲುವುಗಳು, ಹೆಣ್ಣು, ಸಾಮಾಜಿಕ ವಿದ್ಯಮಾನಗಳು ಹೀಗೆ ಬಹುಮುಖೀಯ ಅಂಶಗಳು ಕಾವ್ಯ ಸಂಕಲನದ ಮಹತ್ವವವನ್ನು ಹೆಚ್ಚಿಸುತ್ತವೆ.

About the Author

ಜಿ.ಎಸ್. ಶಿವರುದ್ರಪ್ಪ
(07 February 1926 - 23 December 2013)

ಸಮನ್ವಯ ಕವಿಗಳಲ್ಲಿ ಒಬ್ಬರು ಎಂದು ಗುರುತಿಸಲಾಗುವ ಡಾ.ಜಿ.ಎಸ್. ಶಿವರುದ್ರಪ್ಪ ಅವರು ವಿಮರ್ಶಕರಾಗಿಯೂ ಗಣನೀಯ ಸಾಧನೆ ಮಾಡಿದ್ದಾರೆ. ಗದ್ಯ-ಪದ್ಯಗಳೆರಡರಲ್ಲಿಯೂ ಮಾಗಿದ ಪ್ರತಿಭೆ ಅವರದು. ತಂದೆ ಗುಗ್ಗುರಿ ಶಾಂತವೀರಪ್ಪ ಮತ್ತು ತಾಯಿ ವೀರಮ್ಮ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ 1926ರ ಫೆಬ್ರುವರಿ 7ರಂದು ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್ ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದ ಕಾರಣದಿಂದ ಸರಕಾರಿ ನೌಕರಿ ಹಿಡಿಯಬೇಕಾಯಿತು. ಗುಬ್ಬಿ ತಾಲ್ಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಸೇರಿದರು. ಆದರೆ ಓದಲೇಬೇಕೆಂಬ ಅದಮ್ಯ ಆಸೆಯಿಂದ ಕೆಲಸಕ್ಕೆ ವಿದಾಯ ಹೇಳಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದನ್ನು ಮುಂದುವರೆಸಿ ಬಿ.ಎ. ಪದವಿ (1949), ಸ್ವರ್ಣಪದಕದೊಂದಿಗೆ ...

READ MORE

Related Books