ಟಿಪೂ ಸುಲ್ತಾನ ಕಂಡ ಕನಸು

Author : ಗಿರೀಶ ಕಾರ್ನಾಡ

Pages 80

₹ 70.00




Year of Publication: 2012
Published by: ಮನೋಹರ ಗ್ರಂಥ ಮಾಲಾ
Address: ಲಕ್ಷ್ಮಿ ಭವನ, ಸುಭಾಸ ರಸ್ತೆ, ಧಾರವಾಡ-1
Phone: 98454 47002

Synopsys

ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಟಿಪೂ ಕನಸುಗಾರ ದೊರೆ. ಅವನು ತಾನು ಕಂಡ ಕನಸುಗಳನ್ನು ಟಿಪ್ಪಣಿ ರೂಪದಲ್ಲಿ ಬರೆದಿಟ್ಟಿ‌ದ್ದ, ಅದು ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ.

ಭಾರತಕ್ಕೆ ಸ್ವಾತಂತ್ರ್ಯ ದೊರೆತ ಸ್ವರ್ಣ ಮಹೋತ್ಸವ ವರ್ಷದಲ್ಲಿ ಬಿಬಿಸಿಯು ಗಿರೀಶರಿಗೆ ನಾಟಕ ಬರೆಯುವಂತೆ ಕೋರಿದಾಗ ಅವರು ಟಿಪೂವನ್ನು ವಸ್ತುವಾಗಿ ಆಯ್ಕೆ ಮಾಡಿಕೊಂಡರು. ಟಿಪೂವಿನ ಕನಸುಗಳನ್ನು ನಾಟಕವಾಗಿಸಿದರು. ಓದು ಕೃತಿಯಾಗಿ ಯಶಸ್ವಿಯಾದ ಈ ನಾಟಕ ರಂಗದ ಮೇಲೆಯೂ ಮುಖ್ಯವಾಗಿತ್ತು.

ಗಿರೀಶ ಕಾರ್ನಾಡ್ ಅವರ ನಾಟಕ ‘ಟಿಪ್ಪು ಸುಲ್ತಾನ್ ಕಂಡ ಕನಸು’ - 1997ರಲ್ಲಿ ಭಾರತೀಯ ಸ್ವಾತಂತ್ರ್ಯಕ್ಕೆ ಐವತ್ತು ತುಂಬಿದ ಸಂದರ್ಭದಲ್ಲಿ ಇಂಗ್ಲೆಂಡಿನ ಬಿ.ಬಿ.ಸಿ ರೇಡಿಯೋದವರು ಗಿರೀಶ್ ಕಾರ್ನಾಡ್ ಅವರಿಗೆ ಸ್ವಾತಂತ್ರ್ಯದ ದಿನ ಬಿತ್ತರಿಸಲು ಒಂದು ನಾಟಕ ಬರೆದುಕೊಡಲು ಕೇಳಿದ ಕಾರಣಕ್ಕಾಗಿ ಕಾರ್ನಾಡ್ ಅವರು ಬರೆದ ನಾಟಕವಿದು.

ನಾಟಕದ ವಸ್ತು ಆಂಗ್ಲ-ಭಾರತೀಯ ಸಂಬಂಧವನ್ನು ಕುರಿತದ್ದಾಗಿರಬೇಕು ಎಂಬ ಮಾತನ್ನು ಸೂಚ್ಯವಾಗಿ ಬಂದಾಗ ನನಗೆ ಕೂಡಲೇ ಹೊಳೆದದ್ದು ಕರ್ನಾಟಕದ ಕೊನೆಯ ಸ್ವತಂತ್ರ ಶಾಸಕನಾದ ಟಿಪೂ ಸುಲ್ತಾನನ ದುರಂತ ಎಂದು ಗಿರೀಶ್ ಕಾರ್ನಾಡ್ ಹೇಳುತ್ತಾರೆ. ತನ್ನ ಇಡೀ ಬಾಳನ್ನು ಬಡಿದಾಟದಲ್ಲೇ ನೀಗಿಸಿದ ಈ ವ್ಯಕ್ತಿ ಗುಟ್ಟಾಗಿ ತನ್ನ ಕನಸುಗಳನ್ನು ಬರೆದಿಡುತ್ತಿದ್ದ ಎಂಬ ಮಾತನ್ನು ಏ.ಕೆ.ರಾಮಾನುಜನ್ ಅವರಿಂದ ಕೇಳಿದಂದಿನಿಂದ ನನಗೆ ಟಿಪೂವಿನಿನಲ್ಲಿ ವಿಶೇಷ ಆಸಕ್ತಿ ಉಂಟಾಗಿತ್ತು ಎನ್ನುತ್ತಾರೆ ಕಾರ್ನಾಡ್. ಅದೇ ಈ ನಾಟಕದ ಆರಂಭ ಬಿಂದು ಎಂಬುದು ಅವರ ಅಭಿಪ್ರಾಯ.

 

 

About the Author

ಗಿರೀಶ ಕಾರ್ನಾಡ
(19 May 1934 - 10 June 2019)

ನಾಟಕಕಾರ ಗಿರೀಶ್ ಕಾರ್ನಾಡ್ ಅವರು  ರಂಗಭೂಮಿ- ಚಲನಚಿತ್ರ ನಟರಾಗಿ, ನಿರ್ದೇಶಕರಾಗಿ,  ಸಂಗೀತ- ನಾಟಕ ಅಕಾಡೆಮಿಗಳ ಅಧ್ಯಕ್ಷರಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧರಾಗಿದ್ದಾರೆ. ಕತೆ, ವಿಮರ್ಶೆ ಮತ್ತು ತಮ್ಮ ಆತ್ಮಕತೆ ‘ಆಡಾಡತ ಆಯುಷ್ಯ’ಗಳನ್ನು ಬರೆದಿದ್ದರೂ ನಾಟಕಕಾರ ಎಂದೇ ಚಿರಪರಿಚಿತರು. ಗಿರೀಶ್ 1934ರ ಮೇ 19ರಂದು ಮಹಾರಾಷ್ಟ್ರದ ಮಾಥೇರದಲ್ಲಿ ಜನಿಸಿದರು. ಉತ್ತರಕನ್ನಡದ ಶಿರಸಿಯಲ್ಲಿ ಪ್ರಾಥಮಿ ಶಿಕ್ಷಣ ಧಾರವಾಡದ  ಬಾಸೆಲ್ ಮಿಶನ್ ಪ್ರೌಢಶಿಕ್ಷಣ, ಹಾಗೂ ಕರ್ನಾಟಕ ಕಾಲೇಜಿನಲ್ಲಿ ಪದವಿ ಶಿಕ್ಷಣ  ಪಡೆದ ಬಳಿಕ ಪ್ರತಿಷ್ಠಿತ ರೋಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್ ಫರ್ಡಿನಲ್ಲಿ ಹೆಚ್ಚಿನ ವ್ಯಾಸಂಗ ಮಾಡಿದರು.  ಆಕ್ಸ್ ಫರ್ಡಿನ ಡಿಬೇಟ್ ಕ್ಲಬ್ಬಿಗೆ ಅಧ್ಯಕ್ಷರಾಗಿ ಆಯ್ಕೆಯಾದ ...

READ MORE

Related Books