ತಿರುಳ್ ಗನ್ನಡ ನಾಡು ಪುಲಿಗೆರೆ

Author : ಸದಾನಂದ ಕನವಳ್ಳಿ

Pages 122

₹ 50.00




Year of Publication: 2010
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಲಕ್ಷ್ಮೇಶ್ವರ ಎಂದೇ ಪ್ರಸಿದ್ದಿಯಾದ ಪುಲಿಗೆರೆಯ ಬಗ್ಗೆ ಈ ಕೃತಿ ವಿವರಗಳನ್ನು ಒದಗಿಸುತ್ತೆ. ಕನ್ನಡ ಸಾಹಿತ್ಯ, ಸಾಂಸ್ಕ್ರತಿಕ ಲೋಕಕ್ಕೆ ತನ್ನದೇ ಆದ ಹಲವು ಮಹತ್ತರ ಕೊಡುಗೆ ನೀಡಿದ ಪುಲಿಗೆರೆಯ ಬಗ್ಗೆ ಅನೇಕ ಬೇರೆ ಬೇರೆ ಸಂಶೋಧಕರು  ಕಂಡ ಅನೇಕ ಸತ್ಯಾಂಶಗನ್ನು ಬಿಡಿ ಬಿಡಿ ಲೇಖನವಾಗಿ ಈ ಕೃತಿಯಲ್ಲಿ ವಿವರಿಸಲಾಗಿದೆ. ಷ. ಶೆಟ್ಟರ್, ಎಂ.ಎಂ. ಕಲಬುರ್ಗಿ, ಎಸ್.ಎಚ್. ರಿತ್ತಿ, ಎಂ.ಬಿ. ಬೋಯಿ, ವಿ.ಶಿವಾನಂದ ಮುಂತಾದವರು ಪುಲಿಗೆರೆ ಬಗ್ಗೆ ಪಟ್ಟ ಅಭಿಪ್ರಾಯದ ಬಗ್ಗೆ ಉಭಯ ಲೇಖಕರು ವಿವರಗಳನ್ನು ಈ ಕೃತಿಯಲ್ಲಿ ಒದಗಿಸಿದ್ದಾರೆ.

About the Author

ಸದಾನಂದ ಕನವಳ್ಳಿ
(18 September 1935 - 03 April 2015)

ಸಾಹಿತ್ಯ, ಸಂಗೀತ, ಕ್ರೀಡಾ ಪ್ರೇಮಿ ಸದಾನಂದ ಕನವಳ್ಳಿಯವರು (ಜನನ: 18-09-1935) ಸವಣೂರ ತಾಲ್ಲೂಕಿನ ಹಿರೇಮುಗದೂರ ಗ್ರಾಮದವರು. ತಂದೆ ವೀರಪ್ಪ, ತಾಯಿ ವೀರಮ್ಮ. ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ, ಧಾರವಾಡದ ಕರ್ನಾಟಕ ಕಾಲೇಜಿನಿಂದ ಬಿ.ಎ. (ಇಂಗ್ಲಿಷ್) ಮತ್ತು ಎಂ.ಎ. (ಇಂಗ್ಲಿಷ್) ಪದವೀಧರರು. ಡಾ. ವಿ.ಕೃ. ಗೋಕಾಕ್ ಮತ್ತು ಅರ್ಮೆಂಡೊ ಮೆನೆಜಿಸ್ ಶಿಷ್ಯರು. ಹುಬ್ಬಳ್ಳಿಯ ಪಿ.ಸಿ. ಜಾಬಿನ ವಿಜ್ಞಾನ ಕಾಲೇಜು, ವಿಜಯ ಕಾಲೇಜು, ವಿಜಾಪುರದ ಎ.ಎಸ್.ಪಿ. ಕಾಮರ್ಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. ಕೊಪ್ಪಳದ ಗವಿಸಿದ್ದೇಶ್ವರ ಕಾಲೇಜು ಮತ್ತು ಮುನಿಸಿಪಲ್ ಆರ್ಟ್ಸ್ ಕಾಲೇಜು-ಲಕ್ಷ್ಮೇಶ್ವರದಲ್ಲಿ ಪ್ರಾಚಾರ‍್ಯರಾಗಿ ನಿವೃತ್ತರಾದರು. 1991-92ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಪ್ರಸಾರಾಂಗದ ನಿರ್ದೇಶಕರಾಗಿ, ಅಲ್ಪಾವಧಿಯಲ್ಲಿ 110 ಪುಸ್ತಕಗಳ ಪ್ರಕಟಣೆಯ ದಾಖಲೆ ಮಾಡಿದ್ದರು. ಕರ್ನಾಟಕ ವಿ.ವಿ ...

READ MORE

Related Books