ತಿರುಪ್ಪಾವೈ

Author : ಕೆ.ಎಸ್‍. ನಾರಾಯಣಾಚಾರ್ಯ

Pages 152

₹ 135.00

Buy Now


Year of Publication: 2020
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ಬೀದಿ, ಹುಬ್ಬಳ್ಳಿ- 580020
Phone: 08362367676

Synopsys

ಕನ್ನಡ ಸುಬೋಧಿನಿಯ ವ್ಯಾಖ್ಯಾನ ಸಹಿತ ಕೃತಿಯೇ-ತಿರುಪ್ಪಾವೈ. ಕೃತಿಯ ಕರ್ತೃ-ಕೆ. ಎಸ್. ನಾರಾಯಣಾಚಾರ್ಯ. ಆಂಡಾಳ್, ಹನ್ನೆರಡು ಜನ ಆಳ್ವಾರುಗಳಲ್ಲಿ ಒಬ್ಬಳು.ತಮಿಳು ಭಾಷೆಯಲ್ಲಿ ಪ್ರಸಿದ್ಧವಾಗಿರುವ ತಿರುಪ್ಪಾವೈಗಳ ರಚನೆ ಮಾಡಿರುವವಳು. ಈಕೆ ಪರಿಯಾಳ್ವಾರರ ಸಾಕುಮಗಳು. ಗೋದಾದೇವಿ ಎಂದೂ ಹೆಸರು. ಈ ಹೆಣ್ಣು ಮಗಳು ಕನಸಿನ ದೈವವೊಂದಕ್ಕೆ ಉಸಿರು ಹೊಯ್ದು ಆತನನ್ನು ವರಿಸಿ ಆತನಲ್ಲೇ ಮೈಗರೆದಳು. ಉಪನಿಷತ್ಸಾರವೆಂದು ಪ್ರಖ್ಯಾತವಾದ ತಿರುಪ್ಪಾವೈ ಎಂಬ ಮೂವತ್ತು ಬಿಡಿ ಪದ್ಯಗಳ ಗೀತ ಮತ್ತು ನಾಚ್ಚಿಯಾರ್ ತಿರುಮೊಳಿ ಎಂಬ 147 ಬಿಡಿ ಪದ್ಯಗಳನ್ನು ತಮಿಳುನಲ್ಲಿ ರಚಿಸಿದ್ದು, ಅವುಗಳ ಕನ್ನಡಾನುವಾದ ಹಾಗೂ ವ್ಯಾಖ್ಯಾನವನ್ನು ಒಳಗೊಂಡಿದೆ.

About the Author

ಕೆ.ಎಸ್‍. ನಾರಾಯಣಾಚಾರ್ಯ
(31 October 1933 - 26 November 2021)

ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ  (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್‌ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್‌ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...

READ MORE

Related Books