ಟೊಮ್ಯಾಟೊ ಕೆಚಪ್

Author : ಅಜಿತ್ ಹರೀಶಿ

Pages 140

₹ 59.00




Published by: ಮೈಲಾಂಗ್‌ ಬುಕ್ಸ್
Phone: 7259268000

Synopsys

ಲೇಖಕ ಡಾ. ಅಜಿತ್ ಹರೀಶಿ ಅವರು ಬರೆದ ಕಥಾಸಂಕಲನ ಕೃತಿ ʻಟೊಮ್ಯಾಟೋ ಕೆಚಪ್ʼ. ಈ ಕಥಾಸಂಕಲನವು 12 ಕಥೆಗಳನ್ನು ಒಳಗೊಂಡಿದೆ. ಪುಸ್ತಕದಲ್ಲಿ ಲೇಖಕ ಸುಬ್ರಾಯ ಚೊಕ್ಕಾಡಿ ಅವರು ಬರೆದಿರುವಂತೆ, “ಈ ಕಥಾಲೋಕದಲ್ಲಿ ನಾರಣಕಾಕಾ, ಗೋಪಣ್ಣರಂಥ ಕಾಮಿಗಳಿದ್ದಾರೆ, ಸಾಬೀತು ಕಥೆಯ ಉಮಾಳಂಥ ದಿಟ್ಟೆಯರಿದ್ದಾರೆ, ಸೆಲೆಯ ಶೀನಣ್ಣನಂಥ ಭಗೀರಥರಿದ್ದಾರೆ. ಮಾನಸಿಕ ನೆಮ್ಮದಿ ಕಳಕೊಂಡ ಕಾದಂಬಿನಿಯಂಥ ಆಧುನಿಕಳಿದ್ದಾಳೆ. ಹೀಗೆ ಒಂದು ವಿಸ್ತೃತ ಮಾನವ ಲೋಕವೊಂದು ನಮ್ಮೆದುರು ಇಲ್ಲಿನ ಕಥೆಗಳಲ್ಲಿ ತೆರೆದುಕೊಳ್ಳುವ ರೀತಿ ಅನನ್ಯವಾಗಿದೆ. ಸಾವಧಾನವಾಗಿ ಕಥೆ ಹೇಳುತ್ತಲೇ ಅದರಾಚಿನ ಇನ್ನೇನನ್ನೋ ಹೊಳೆಯಿಸುವ ಪ್ರಯತ್ನವಿದೆ. ಪ್ರೇಮ, ಕಾಮ, ಹಿಂಸೆ, ಕ್ರೌರ್ಯ, ಒಳಸಂಚು, ಪ್ರತಿಭಟನೆ.. ಇತ್ಯಾದಿಗಳ ನಡುವೆಯೇ ಅರಳಿಕೊಳ್ಳುವ,ಜೀವಚೈತನ್ಯ, ಸವಾಲನ್ನೆದುರಿಸುವ ಸಾಮರ್ಥ್ಯ ಮೊದಲಾದ ಮಾನವ ಲೋಕದ ಸಮಸ್ತ ಗುಣಗಳನ್ನು ಕಲಾತ್ಮಕವಾಗಿ ಕಟ್ಟಿಕೊಡುವ ಯತ್ನದಲ್ಲಿ ಮಹತ್ವದ ಹೆಜ್ಜೆಯಿಟ್ಟಿರುವ ಈ ಕಥಾಸಂಕಲನವು-ಅಜಿತರು ಕನ್ನಡ ಕಥಾ ಕ್ಷೇತ್ರದಲ್ಲಿಗಟ್ಟಿಯಾಗಿ ನೆಲೆಯೂರಲಿದ್ದಾರೆ ಎಂಬುದನ್ನು ಸಾಬೀತು ಪಡಿಸುತ್ತದೆ” ಎಂದು ಹೇಳಿದ್ದಾರೆ.

About the Author

ಅಜಿತ್ ಹರೀಶಿ
(24 August 1978)

ಲೇಖಕ ಡಾ. ಅಜಿತ್  ಹರೀಶಿ ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹರೀಶಿ ಗ್ರಾಮದವರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹುಟ್ಟೂರಿನ ಸರ್ಕಾರಿ ಶಾಲೆಗಳಲ್ಲಿ, ಪದವಿಪೂರ್ವ ಶಿಕ್ಷಣವನ್ನು ಶಿರಸಿಯಲ್ಲಿ ಮುಗಿಸಿರುತ್ತಾರೆ. ಆಯುರ್ವೇದ ಮಹಾವಿದ್ಯಾಲಯ, ಹುಬ್ಬಳ್ಳಿಯಲ್ಲಿ ವೈದ್ಯಕೀಯ ಪದವೀಧರರಾದ  ಇವರು, ಆಕ್ಯುಪಂಕ್ಚರ್ ಚಿಕಿತ್ಸೆ , ಹಿಪ್ನೋಥೆರಪಿಯಲ್ಲಿಯೂ ಪರಿಣಿತರು.  ಪ್ರಸ್ತುತ ಹರೀಶಿಯಲ್ಲಿ ಖಾಸಗಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ಬರವಣಿಗೆಯನ್ನು ತಮ್ಮ ಪ್ರವೃತ್ತಿಯನ್ನಾಗಿಸಿಕೊಂಡಿದ್ದಾರೆ. ಬಿಳಿಮಲ್ಲಿಗೆಯ ಬಾವುಟ, ಸೂರು ಸೆರೆಹಿಡಿಯದ ಹನಿಗಳು, ಕನಸಿನ ದನಿ ಪ್ರಕಟಿತ ಕವನ ಸಂಕಲನಗಳು.  ಪರಿಧಾವಿ, ಕಾಮೋಲ ಮತ್ತು ಮೂಚಿಮ್ಮ ಪ್ರಕಟಿತ ಕಥಾಸಂಕಲನಗಳು.  ಕಥಾಭರಣ ಸಂಪಾದಿತ ಕೃತಿಯಾಗಿದೆ. ಆರೋಗ್ಯದ ಅರಿವು ...

READ MORE

Related Books