ತೊಟ್ಟು ಕ್ರಾಂತಿ

Author : ಕಾವ್ಯಾ ಕಡಮೆ ನಾಗರಕಟ್ಟೆ

Pages 150

₹ 180.00




Year of Publication: 2024
Published by: ಛಂದ ಪುಸ್ತಕ
Address: ಛಂದ ಪುಸ್ತಕ, 1-004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರೋಡ್, ಬೆಂಗಳೂರು- 560076
Phone: 9844422782

Synopsys

‘ತೊಟ್ಟು ಕ್ರಾಂತಿ’ ಕಾವ್ಯಾ ಕಡಮೆ ಅವರ ಕಥಾಸಂಕಲನ. ಈ ಕೃತಿ ಶ್ರೀಧರ ಬಳಗಾರ ಅವರ ಮುನ್ನುಡಿ ಬರಹವಿದೆ. ಕೃತಿಯ ಕುರಿತು ತಿಳಿಸುತ್ತಾ ‘ತೊಟ್ಟು ಕ್ರಾಂತಿ’ ಕಥಾ ಸಂಕಲನವನ್ನು ಓದುತ್ತಿದ್ದಂತೆಯೇ ಆಧುನಿಕ ವಿಕಾರ ಮತ್ತು ಸಾಂಪ್ರದಾಯಕ ಅನಾಚಾರ ಹಾಸುಹೊಕ್ಕಾಗಿರುವ ಮನೆಯೊಂದನ್ನು ಹೊಕ್ಕು ಹೊರ ಬಂದ ಅನುಭವವಾಯಿತು.

ಮುಖ್ಯವಾಗಿ ಬಾಗಿಲಿರದ, ಬಟ್ಟೆ ತೊಟ್ಟಿರದವರ ಈ ಮನೆಯಲ್ಲಿ ಬೆತ್ತಲೆ ನಡೆದಾಡುತ್ತ ಜಾಹೀರಾತಾಗಿರುವ ಸ್ತ್ರೀಯರು, ಮತೀಯ ವಿಕೃತಿ ಮತ್ತು ಪ್ರಾಕೃತಿಕ ದುರ್ವಿಧಿಯನ್ನು ಮುಗ್ಧ ಮಕ್ಕಳಲ್ಲಿ ಎದುರಿಸುವ ಮಾತೃ ಅಂತಃಕರಣದ ತಾಯಂದಿರು ಭೇಟಿಯಾದರು. “ತೊಟ್ಟು ಕ್ರಾಂತಿ” ಕಥೆಯಲ್ಲಿ ಜಗತ್ತಿನಾದ್ಯಂತ ಕಂಪನಿಯ ಶೇರುಗಳನ್ನು ಮಾರಾಟ ಮಾಡಲು ತೆರೆದೆದೆಯ ತರುಣಿಯರು ಮ್ಯಾರಥಾನದಲ್ಲಿ ಭಾಗವಹಿಸುವುದು ಕ್ರಾಂತಿಕಾರಕ ಯೋಜನೆ ಎನ್ನುವುದರಲ್ಲೇ ಬೆಚ್ಚಿಬೀಳಿಸುವ ವ್ಯಂಗ್ಯವಿದೆ.

ಆರ್ಥಿಕ ಲಾಭಕ್ಕಾಗಿ ಮನುಷ್ಯರನ್ನು ಬೀದಿಯಲ್ಲಿ ಅರೆಬೆತ್ತಲ ಜಾಹೀರಾತಾಗಿಸಿ ಮಾರುವ ಸ್ಪರ್ಧೆಗೆ ಇಳಿದಿರುವ ಕಂಪನಿಯ ಸಿಇಓಗಳು ಸ್ವಯಂ ತಮ್ಮ ಮಾನಭಂಗಕ್ಕಿಳಿದಿರುವುದು ನೈತಿಕತೆಯ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಸ್ತ್ರೀಯ ಸ್ವಾತಂತ್ರ್ಯದ ಅಭಿವ್ಯಕ್ತಿಯಾಗಿ ಮ್ಯಾರಥಾನನ್ನು ನೋಡುವುದರಲ್ಲಿರುವ ದುರಂತದ ಸಾಧ್ಯತೆಯನ್ನು ಕಥೆ ಅತ್ಯಂತ ಸೂಕ್ಷ್ಮವಾಗಿ ಸೂಚಿಸುತ್ತದೆ ಎಂದಿದ್ದಾರೆ.

About the Author

ಕಾವ್ಯಾ ಕಡಮೆ ನಾಗರಕಟ್ಟೆ

ಕಾವ್ಯಾ ಕಡಮೆ ಉತ್ತರ ಕನ್ನಡ ಜಿಲ್ಲೆಯ ಕಡಮೆಯವರು. 1988ರಲ್ಲಿ ಜನನ. ಬಿಎಸ್ಸಿ ನಂತರ ಕರ್ನಾಟಕ ವಿವಿಯಿಂದ ಆರು ಚಿನ್ನದ ಪದಕಗಳೊಂದಿಗೆ ಪತ್ರಿಕೋದ್ಯಮ ಎಂ.ಎ ಪದವಿ. 2013ರಿಂದ ಅಮೆರಿಕಾದ ನ್ಯೂಜೆರ್ಸಿಯಲ್ಲಿ ವಾಸ. ‘ಧ್ಯಾನಕೆ ತಾರೀಖಿನ ಹಂಗಿಲ್ಲ’, ‘ಜೀನ್ಸ್ ತೊಟ್ಟ ದೇವರು’ ಪ್ರಕಟಿತ ಕವನ ಸಂಕಲನಗಳು. ‘ಮಾಕೋನ ಏಕಾಂತ’, ‘ತೊಟ್ಟು ಕ್ರಾಂತಿ’ ಕಥಾ ಸಂಕಲನಗಳು. ‘ಪುನರಪಿ’ ಕಾದಂಬರಿ. ‘ಆಟದೊಳಗಾಟ’ ಮತ್ತು ‘ಡೋರ್ ನಂಬರ್ ಎಂಟು’ ಹಾಗೂ ‘ಸಂಜೀವಿನಿ ಸ್ಟೋರ್ಸ್’ ನಾಟಕ ಸಂಕಲನಗಳು. ‘ದೂರ ದೇಶವೆಂಬ ಪಕ್ಕದ ಮನೆ’ ಪ್ರಬಂಧ ಸಂಕಲನ.  ಇವರ ಪದ್ಯ ಕೃತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ...

READ MORE

Related Books