ತುಳುನಾಡ ಸಿರಿ

Author : ಡಾ. ಧರಣೀದೇವಿ ಮಾಲಗತ್ತಿ

Pages 32

₹ 7.00




Year of Publication: 1995
Published by: ರಾಜ್ಯ ಸಂಪನ್ಮೂಲ ಕೇಂದ್ರ
Address: ಕರ್ನಾಟಕ ರಾಜ್ಯ ವಯಸ್ಕರ ಶಿಕ್ಷಣ ಸಮಿತಿ, ಕುವೆಂಪು ನಗರ, ಮೈಸೂರು- 570023

Synopsys

‘ತುಳುನಾಡ ಸಿರಿ’ ಕರ್ನಾಟಕ ರಾಜ್ಯ ವಯಸ್ಕರ ಶಿಕ್ಷಣ ಸಮಿತಿಯ ರಾಜ್ಯ ಸಂಪನ್ಮೂಲ ಕೇಂದ್ರದ ನವಸಾಕ್ಷರರ ಪುಸ್ತಕ ಮಾಲೆಯಲ್ಲಿ ಪ್ರಕಟವಾದ ಕೃತಿ. 1994-95ನೇ ಸಾಲಿಗೆ ಜನಶಿಕ್ಷಣ ನಿಲಯಗಳಿಗೆ ನವಸಾಕ್ಷರರ ಪುಸ್ತಕ ಮಾಲೆಯಲ್ಲಿ ವಿಜ್ಞಾನ, ಗ್ರಾಮೀಣ ಅಭಿವೃದ್ಧಿ, ಜನಪದ, ಸೃಜನಶೀಲ ಹಾಗೂ ಐತಿಹಾಸಿಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 120 ಪುಸ್ತಕಗಳನ್ನು ಆಯಾ ಕ್ಷೇತ್ರದ ತಜ್ಞ ಲೇಖಕರಿಂದ ಬರೆಯಿಸಿ ಪ್ರಕಟಿಸಲಾಗಿದೆ. ಮುದ್ರಣಕ್ಕೆ ಮೊದಲು ಕ್ಷೇತ್ರಮಟ್ಟದಲ್ಲಿ ನವಸಾಕ್ಷರರಿಂದ ಓದಿಸಿ ಅಗತ್ಯ ಕಂಡುಬಂದ ಕಡೆಗಳಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲಾಗಿದೆ. ಹೀಗಾಗಿ ಈ ಪುಸ್ತಕಗಳು ನವಸಾಕ್ಷರರಿಗೆ ಹೆಚ್ಚು ಉಪಯುಕ್ತವಾಗಿದ್ದು, ಅವರ ಆಸಕ್ತಿಗೆ ಅನುಗುಣವಾಗಿ ಅವರಿಂದ ಸ್ವೀಕರಿಸಲ್ಪಟ್ಟರೆ ನಮ್ಮೆಲ್ಲರ ಶ್ರಮ ಸಾರ್ಥಕವಾಗುತ್ತದೆ ಎಂದಿದ್ದಾರೆ ರಾಜ್ಯ ಸಂಪನ್ಮೂಲ ಕೇಂದ್ರದ ನಿರ್ದೇಶಕರಾಗಿದ್ದ ಪಿ. ಸುಬ್ಬರಾವ್. ತುಳುನಾಡ ಸಿರಿ ಕೃತಿಯನ್ನು ಲೇಖಕಿ ಧರಣಿದೇವಿ ಮಾಲಗತ್ತಿ ನವಸಾಕ್ಷರರು ಸುಲಭವಾಗಿ ಓದಲು ಅನುಕೂಲವಾಗುವಂತೆ ಸರಳವಾಗಿ ರಚಿಸಿದ್ದಾರೆ.

About the Author

ಡಾ. ಧರಣೀದೇವಿ ಮಾಲಗತ್ತಿ
(12 May 1967)

ಕವಿ, ಮಹಿಳಾಪರ ಸಾಹಿತಿ ಧರಣೀದೇವಿ ಮಾಲಗತ್ತಿ ಅವರು ಪೊಲೀಸ್ ಇಲಾಖೆಯಲ್ಲಿ ವಿವಿಧ ಉದ್ದೆಗಳನ್ನು ನಿರ್ವಹಿಸಿ ಸದ್ಯ ಐ.ಪಿ.ಎಸ್. ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವರಾದ ಧರಣೀದೇವಿಯವರ ತಂದೆ- ಪಿ.ದೂಮಣ್ಣ ರೈ, ತಾಯಿ- ದೇವಕಿ ಡಿ.ರೈ. ಕುಕ್ಕಾಜೆ. ಬಿಬಿಎಂ ಹಾಗೂ ಎಂ.ಕಾಂ. ಕನ್ನಡ ಎಂ.ಎ ಪದವೀಧರೆಯಾಗಿರುವ ಅವರು ನಿರ್ವಹಣಾ ಶಾಸ್ತ್ರದಲ್ಲಿ ಪಿ.ಹೆಚ್.ಡಿಯನ್ನು ಪಡೆದಿದ್ದಾರೆ.  1990ರಿಂದ 1991 ರ ವರೆಗೆ ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ವಿಭಾಗದಲ್ಲಿ ಸಂಶೋಧನಾ ಸಹಾಯಕರಿಯಾಗಿ, 1991 ರಿಂದ 1993 ರ  ವರೆಗೆ ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ, 1993ರಿಂದ 94ರ ವರೆಗೆ ...

READ MORE

Related Books