ತುರ್ತು ಪರಿಸ್ಥಿತಿಯ ಕರಾಳ ಮುಖ

Author : ಸಾರಾ ಅಬೂಬಕ್ಕರ್

Pages 73

₹ 50.00




Published by: ಚಂದ್ರಗಿರಿ ಪ್ರಕಾಶನ
Address: ಬೆಂಗಳೂರು

Synopsys

‘ತುರ್ತು ಪರಿಸ್ಥಿತಿಯ ಕರಾಳ ಮುಖ’ ಕೃತಿಯು ಸಾರಾ ಅಬೂಬಕರ್ ಅವರ ಅನುವಾದಿತ ಕಥನವಾಗಿದೆ. ಸ್ವತಂತ್ಯ್ರ ಭಾರತದ ಚರಿತ್ರೆಯ ಕಪ್ಪು ಚುಕ್ಕೆಯಂತಿರುವ ತುರ್ತು ಪರಿಸ್ಥಿತಿಯ ಕೊನೆಗೊಂಡು ಇಪ್ಪತ್ತೈದು ವರ್ಷಗಳಾದರೂ ಅದರ ಕಹಿನೆನಪುಗಳು ಇನ್ನೂ ಮಾಸಿಲ್ಲ. ಅನೇಕ ಅಮಾಯಕರ ಸಾವುನೋವಿಗೆ ಕಾರಣವಾದ ತುರ್ತು ಪರಿಸ್ಥಿತಿಯ ಪ್ರಜಾಪ್ರಭುತ್ವದ ಅಡಿಗಲ್ಲನೇ ಅಲ್ಲಾಡಿಸಿದ ಕರಾಳ ಸಂದರ್ಭ. ಆ ಕರಾಳ ದಿನಗಳಲ್ಲಿ ಕೇರಳದ ಅಮಾಯಕ ವಿದ್ಯಾರ್ಥಿಯೊಬ್ಬ ವ್ಯವಸ್ಥೆಯ ಕಬಂಧ ಬಾಹುಗಳಿಗೆ ಬಲಿಯಾದದ್ದು, ಮಗ ನಾಪತ್ತೆಯಾಗಿರುವನೆಂದು ತಿಳಿದು ಅವನನ್ನು ಹುಡುಕಲು ವೃದ್ಧ ತಂದೆಯೊಬ್ಬ ಪಟ್ಟ ಪಡಿಪಾಟಲುಗಳ ಕಥನ ‘ತುರ್ತು ಪರಿಸ್ಥಿತಿಯ ಕರಾಳ ಮುಖ’ ಕೃತಿಯಾಗಿದೆ.

About the Author

ಸಾರಾ ಅಬೂಬಕ್ಕರ್
(30 June 1936 - 10 January 2023)

ಕನ್ನಡದ ಪ್ರಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರು 1936ರ ಜೂನ್ 30ರಂದು  ಕಾಸರಗೋಡಿನ ಚಂದ್ರಗಿರಿ ತೀರದ  ಗ್ರಾಮವೊಂದರಲ್ಲಿ ಜನಿಸಿದರು. ತಂದೆ ನ್ಯಾಯವಾದಿಗಳಾಗಿದ್ದ ಪಿ. ಅಹಮದ್ ಅವರು ಮತ್ತು  ತಾಯಿ ಚೈನಾಬಿ ಅವರು. ಸಾರಾ ಅವರ ಪ್ರಾಥಮಿಕ ವಿದ್ಯಾಭ್ಯಾಸ ಅವರ ಹುಟ್ಟಿದೂರಿನಲ್ಲೇ ನೆರವೇರಿತು.  ಮುಂದೆ ಅವರು ಹೈಸ್ಕೂಲುವರೆಗೆ ಕಲಿತದ್ದು ಕಾಸರಗೋಡಿನಲ್ಲಿ. ಎಂಜನಿಯರ್ ಆಗಿದ್ದ ಅಬೂಬಕ್ಕರ್‌ ಅವರೊಡನೆ ಸಾರಾ ಅವರ ವಿವಾಹ ಏರ್ಪಟ್ಟು ವಿದ್ಯಾಭ್ಯಾಸಕ್ಕೆ ವಿದಾಯ ಹೇಳುವಂತಾಯಿತು. ಆದರೆ ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಸಾರಾ ಅವರು ಶಿವರಾಮ  ಕಾರಂತರು, ಇನಾಂದಾರ್, ಭೈರಪ್ಪ, ಅನಂತಮೂರ್ತಿ ಇವರೆಲ್ಲರ ಬರವಣಿಗೆಗೆ ಮಾರು ಹೋಗಿ ಸದಾ ...

READ MORE

Related Books