ತ್ಯಾಗಮಯಿ ರಮಾಬಾಯಿ ಅಂಬೇಡ್ಕರ್

Author : ಪ್ರಭುಲಿಂಗ ನೀಲೂರೆ

Pages 112

₹ 100.00




Year of Publication: 2021
Published by: ಬಿಸಿಲನಾಡು ಪ್ರಕಾಶನ
Address: # 1-871, ವೆಂಕಟೇಶ ನಗರ, ಕಲಬುರಗಿ
Phone: 9481000094

Synopsys

ಪತ್ರಕರ್ತ ಪ್ರಭುಲಿಂಗ ನೀಲೂರೆ ಅವರು ಕಿಶೋರಿಲಾಲ್ ಅಹರವಾಲ್, ಎಚ್.ವಿ. ಬೌದ್ಧ ಅವರು ಹಿಂದಿಯಲ್ಲಿ ಬರೆದ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ ಕೃತಿ-ತ್ಯಾಗಮಯಿ ರಮಾಬಾಯಿ ಅಂಬೇಡ್ಕರ್. ಡಾ.ಬಿ.ಆರ್.ಅಂಬೇಡ್ಕರ್ ಎಂಬ ಮಹಾವೃಕ್ಷಕ್ಕೆ ತಾಯಿ ಬೇರಾದವರು ರಮಾಬಾಯಿ. ಅವರು ಅನುಭವಿಸಿದ ನೋವು, ಹಸಿವು, ಬಡತನ, ನಿಂದನೆ, ಮಕ್ಕಳ ಸಾವಿನ ಆಕ್ರಂದನ ಜಗತ್ತಿನ ಯಾವ ಮಹಾಪುರುಷನ, ಮಹಾತ್ಮನ ಪತ್ನಿ ಅನುಭವಿಸಿದ ಉದಾಹರಣೆಗಳಿಲ್ಲ. ಆ ತಾಯಿಯಲ್ಲದೆ ಇನ್ನಾರೂ ಆ ಕ್ರೂರ ಬದುಕನ್ನು ಸಹಿಸಲಾಗುತ್ತಿರಲಿಲ್ಲವೆನೋ ? ಜಗತ್ತಿನ ಯಾವ ಮಹಾನ್ ನಾಯಕರಿಗೂ ಸಿಗದಂತಹ ತ್ಯಾಗಮಯಿ ಸತಿ ಅಂಬೇಡ್ಕರ್ ಅವರಿಗೆ ಲಭಿಸಿದ್ದೇ ಒಂದು ರೀತಿಯಲ್ಲಿ ನಮ್ಮ ದೇಶಕ್ಕೆ ಸಂವಿಧಾನ ರಚಿಸಿ ಆ ಮೂಲಕ ಸಮಸಮಾಜ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಕಾರಣವೂ ಆಯಿತು ಎನ್ನಬಹುದು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಯಶಸ್ವಿ ಹೋರಾಟದ ಹಿಂದೆ ಪತ್ನಿ ರಮಾಬಾಯಿ ಅಂಬೇಡ್ಕರ್ ಅವರ ಪಾತ್ರ ಹಿರಿದು. ಪತಿಯನ್ನು ಸೂರ್ಯನಾಗಿಸುವ ಭರದಲ್ಲಿ ತನ್ನನ್ನೇ ಸುಟ್ಟುಕೊಳ್ಳುತ್ತ ಬದುಕಿದ ಮಹಾಮಾತೆಯ ಸಮಗ್ರ ಜೀವನ ಚಿತ್ರಣ ಈ ಕೃತಿಯಲ್ಲಿದೆ ಎಂದು ಅನುವಾದಕರು ಹೇಳಿದ್ದಾರೆ.

About the Author

ಪ್ರಭುಲಿಂಗ ನೀಲೂರೆ
(22 July 1974)

ಲೇಖಕ ಹಾಗೂ ಪತ್ರಕರ್ತ ಪ್ರಭುಲಿಂಗ ನೀಲೂರೆ ಅವರು ಮೂಲತಃ  ಕಲಬುರಗಿ ಜಿಲ್ಲೆಯ  ಆಳಂದ ತಾಲೂಕಿನ ಹಳ್ಳಿಸಲಗರ ಗ್ರಾಮದವರು. ಬಿ.ಎಸ್.ಸಿ. ಪದವೀಧರರು. ವಿಜಯ ಕರ್ನಾಟಕ ಕನ್ನಡ ದಿನಪತ್ರಿಕೆಯ ಕಲಬುರಗಿ ಆವೃತ್ತಿಯಲ್ಲಿ ಮುಖ್ಯ ಉಪ ಸಂಪಾದಕರು. 1990ರಲ್ಲಿ ಮಹತ್ವಾಕಾಂಕ್ಷಿ ಸಾಮಾಜಿಕ ಸೇವಾ ಸಂಸ್ಥೆ ಆರಂಭಿಸಿದ್ದಾರೆ. ಕನ್ನಡದ ಮೊಟ್ಟಮೊದಲ ಉಪಲಬ್ದ ಗ್ರಂಥ ಕವಿರಾಜಮಾರ್ಗದ ರಚನೆಕಾರ ಶ್ರೀವಿಜಯನ ಹೆಸರಲ್ಲಿ ರಾಜ್ಯಮಟ್ಟದ ಸಾಹಿತ್ಯಕ ಪ್ರಶಸ್ತಿ ಆರಂಭಿಸಿ, ಸರಕಾರ ಆ ಪ್ರಶಸ್ತಿ ಘೋಷಣೆ ಮಾಡುವವರೆಗೂ ಸಂಸ್ಥೆ ಮೂಲಕ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ. ಬಿಸಿಲನಾಡು ಪ್ರಕಾಶನ ಸಂಸ್ಥೆಯೂ ನಡೆಸುತ್ತಿದ್ದಾರೆ. ಕೃತಿಗಳು: ಅಜ್ಜ ಹೇಳಿದ ಕಲ್ಯಾಣಕ್ರಾಂತಿ ಕಥೆ (ಮಕ್ಕಳ ಕಥನ)  ಹುಕುಂಪತ್ರ (ಐತಿಹಾಸಿಕ ನಾಟಕ) -ತತ್ವಪದಕಾರ ಚನ್ನೂರ ...

READ MORE

Related Books