ಯು.ಆರ್. ಅನಂತಮೂರ್ತಿ ಅವರ ಆಯ್ದ ಕಥೆಗಳು

Author : ಯು.ಆರ್. ಅನಂತಮೂರ್ತಿ

Pages 108

₹ 75.00




Year of Publication: 2015
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಕನ್ನಡದ ಪ್ರಮುಖ ಚಿಂತಕ-ಕತೆಗಾರ-ಲೇಖಕ ಯು.ಆರ್‌. ಅನಂತಮೂರ್ತಿ ಅವರು ತಮ್ಮ ಬರಹಗಳ ಮೂಲಕ ಹೆಸರುವಾಸಿಯಾಗಿದ್ದವರು. ’ಸಂಸ್ಕಾರ’ ಕಾದಂಬರಿಯಿಂದ ಆರಂಭವಾದ ಅವರ ಸಾಹಿತ್ಯ ಯಾನ ಕತೆ-ಕಾದಂಬರಿಗಳ ಕ್ಷಿತಿಜ ವಿಸ್ತರಣೆಗೆ ಕಾರಣವಾಯಿತು. ಅನಂತಮೂರ್ತಿ ಅವರ ಕತೆಗಳು ಕನ್ನಡ ಕಥನಲೋಕದ ಮೈಲಿಗಲ್ಲುಗಳಲ್ಲಿ ಒಂದು ಎಂದು ಪರಿಗಣಿಸಲಾಗುತ್ತದೆ. ಅನಂತಮೂರ್ತಿ ಅವರ ಆಯ್ದ ಪ್ರಮುಖ ಕತೆಗಳನ್ನು ಈ ಸಂಕಲನ ಒಳಗೊಂಡಿದೆ.

About the Author

ಯು.ಆರ್. ಅನಂತಮೂರ್ತಿ
(21 December 1932 - 22 August 2014)

ಕಥೆ-ಕಾದಂಬರಿ ಮತ್ತು ವೈಚಾರಿಕ ಚಿಂತನೆಗಳ ಮೂಲಕ ಕನ್ನಡ- ಭಾರತದ ಸಾಹಿತ್ಯ-ಸಾಂಸ್ಕೃತಿಕ ಚಿಂತನೆಯನ್ನು ಶ್ರೀಮಂತಗೊಳಿಸಿದವರು ಯು.ಆರ್. ಅನಂತಮೂರ್ತಿ. ತಂದೆ ಉಡುಪಿ ರಾಜಗೋಪಾಲಾಚಾರ್ಯ ತಾಯಿ ಸತ್ಯಮ್ಮ. ತೀರ್ಥಹಳ್ಳಿಯ ಮೇಳಿಗೆಯಲ್ಲಿ 1932ರ ಡಿಸೆಂಬರ್ 21 ಜನಿಸಿದರು. ದೂರ್ವಾಸಪುರದಲ್ಲಿ ಸಾಂಪ್ರದಾಯಿಕ ಪದ್ಧತಿಯಲ್ಲಿ ಸಂಸ್ಕೃತ ಕಲಿತು ಶಾಲಾ ಶಿಕ್ಷಣವನ್ನು ತೀರ್ಥಹಳ್ಳಿಯಲ್ಲಿ ಪಡೆದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು. ಬರ್ಮಿಂಗ್ ಹ್ಯಾಂ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ (1966) ಪದವಿ ಪಡೆದರು. ಹಾಸನದ ಕಾಲೇಜಿನಲ್ಲಿ ಅಧ್ಯಾಪಕ (1956) ರಾದ ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಂತರ ಕೇರಳದ ಮಹಾತ್ಮಗಾಂಧಿ ವಿಶ್ವವಿದ್ಯಾಲಯದ ಕುಲಪತಿ (1987-91) ಗಳಾಗಿ ...

READ MORE

Related Books