ಉದಯ ಶಂಕರ್

Author : ಎಸ್‌.ಆರ್‌. ರಾಮಸ್ವಾಮಿ

Pages 102

₹ 15.00




Year of Publication: 1979
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಬೆಂಗಳೂರು-19.

Synopsys

‘ಉದಯ ಶಂಕರ್' ಕೃತಿಯು ಜೀವನ ಚರಿತ್ರೆಯಾಗಿದೆ. ಲೇಖಕ ಎಸ್.‌ ಆರ್.‌ ರಾಮಸ್ವಾಮಿ ಅವರು ರಚಿಸಿದ್ದಾರೆ. 20ನೇ ಶತಮಾನದ ಪೂರ್ವಾರ್ಧದಲ್ಲಿ ಭಾರತೀಯ ನೃತ್ಯಕಲೆಯ ಪುನರುಜ್ಜೀವನಕ್ಕೂ, ಹತ್ತಾರು ಹೊಸ ನೃತ್ಯರೂಪಕಗಳ ಸೃಷ್ಟಿಗೂ, ಭಾರತೀಯ ನರ್ತನದ ಅಂತರರಾಷ್ಟ್ರೀಯ ಖ್ಯಾತಿಗೂ ಕಾರಣರಾದವರು ಉದಯಶಂಕರ್ ಎಂದು ಈ ಪುಸ್ತಕದಲ್ಲಿ ವಿವರಿಸಲಾಗಿದೆ.

ಉದಯ ಶಂಕರ್ ಅವರ ಬಾಲ್ಯದ ಜೀವ, ಬದುಕಿನ ತಿರುವುಗಳು, ನೃತ್ಯದಲ್ಲಿನ ಸಾಧನೆಗಳು, ಏಳು-ಬೀಳುಗಳು ಹೀಗೆ ಹಲವು ಆಯಾಮಗಳನ್ನು ಸರಳ ಕನ್ನಡದಲ್ಲಿ   ಜನಸಾಮನ್ಯರಿಗೂ ಅರ್ಥವಾಗುವಂತೆ ಲೇಖಕರು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ.

About the Author

ಎಸ್‌.ಆರ್‌. ರಾಮಸ್ವಾಮಿ

ನಾಡೋಜ ಎಸ್‌.ಆರ್‌.ರಾಮಸ್ವಾಮಿ ಅವರು ಪತ್ರಕರ್ತರಾಗಿ, ಲೇಖಕರಾಗಿ, ಚಿಂತಕರಾಗಿ, ವಿಮರ್ಶಕರಾಗಿ, ಸಾಮಾಜಿಕ ಕಾರ್ಯಕರ್ತರಾಗಿ ನಾಡಿನಲ್ಲಿ ಸುಪರಿಚಿತರು. ಮೂಲತಃ ಬೆಂಗಳೂರಿನವರೇ ಆದ ರಾಮಸ್ವಾಮಿ ಅವರು ಕನ್ನಡ, ತೆಲುಗು, ಸಂಸ್ಕೃತ, ಹಿಂದಿ, ಇಂಗ್ಲಿಷ್, ಜರ್ಮನ್, ಫ್ರೆಂಚ್ ಭಾಷೆಗಳಲ್ಲಿ ಪ್ರಾವೀಣ್ಯತೆ ಹೊಂದಿದವರು. 1950ರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದ ಇವರು, 1972 ರಿಂದ 79ರ ವರೆಗೆ ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕರಾಗಿ ಸೇವೆ ಸಲ್ಲಿಸಿದರು. 1980ರಲ್ಲಿ ರಾಷ್ಟೋತ್ಥಾನ ಸಾಹಿತ್ಯ ಮತ್ತು ಉತ್ಥಾನ ಮಾಸಪತ್ರಿಕೆಯ ಗೌರವ ಪ್ರಧಾನ ಸಂಪಾದಕರಾದ ಇವರು ಇಂದಿಗೂ ಆ ಹುದ್ದೆಯಲ್ಲಿ ಸೇವಾನಿರತರಾಗಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು 55 ಕ್ಕೂ ...

READ MORE

Related Books