ಉದಯರಾಗ

Author : ಅ.ನ.ಕೃ (ಅ.ನ. ಕೃಷ್ಣರಾಯ)

Pages 104

₹ 80.00




Year of Publication: 2014
Published by: ಅಂಕಿತ ಪುಸ್ತಕ
Address: #53, ಗಾಂಧಿದಿಬಜಾರ, ಬಸವನಗುಡಿ, ಬೆಂಗಳೂರು-560004
Phone: 08026617100

Synopsys

ಅ.ನ.ಕೃ ಅವರ ಉದಯರಾಗ ಕಾದಂಬರಿಯು ಅವರಿಗೆ ಹೆಚ್ಚಿನ ಜನಪ್ರಿಯತೆ ತಂದು ಕೊಟ್ಟಿತು. ಏಕೆಂದರೆ, ಕನ್ನಡದ ಕಾದಂಬರಿ ಪ್ರಪಂಚವು ಇನ್ನೂ ಕಣ್ಣು ಬಿಡುತ್ತಿರುವಾಗಲೇ ಇಂತಹ ಶಾಸ್ತ್ರೀಯವಾದ ಕಾದಂಬರಿ ಪ್ರಕqಗೊಂಡಿದ್ದು, ಸಾಹಿತ್ಯವಲಯದಲ್ಲಿ ಓದುಗರನ್ನು ಸೃಷ್ಟಿಸಿತ್ತು. ಕಾದಂಬರಿಯು 1934 ರಲ್ಲೇ ಪ್ರಕಟಗೊಂಡಿತ್ತು. ಇದೀಗ 11ನೇ ಮುದ್ರಣ. ಉದಾತ್ತವಾದ ವಿಷಯ ವಸ್ತುವನ್ನು ಒಳಗೊಂಡ ಕಾದಂಬರಿಯ ಎಲ್ಲ ಪಾತ್ರಗಳು ಗಂಭೀರ ಚಿಂತನೆಗೆ ಪ್ರೇರೇಪಿಸುತ್ತವೆ.

About the Author

ಅ.ನ.ಕೃ (ಅ.ನ. ಕೃಷ್ಣರಾಯ)
(09 May 1908 - 04 July 1971)

‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಹೆಸರಾಂತ ಕಾದಂಬರಿಕಾರರು. ‘ಕಾದಂಬರಿ ಸಾರ್ವಭೌಮ’ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರು. ಪ್ರಗತಿಶೀಲ ಸಾಹಿತ್ಯದ ಪ್ರಮುಖ ಲೇಖಕರು. ತಂದೆ ನರಸಿಂಗರಾವ್, ತಾಯಿ ಅನ್ನಪೂರ್ಣಮ್ಮ. 1908ರ ಮೇ 9ರಂದು ಜನಿಸಿದ ಅವರುಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಕೋಲಾರದಲ್ಲಿ ಮುಗಿಸಿದರು. ಬೆಂಗಳೂರಿನಲ್ಲಿ ಪ್ರೌಢಶಾಲಾ ಶಿಕ್ಷಣವನ್ನು ದೇಶೀಯ ವಿದ್ಯಾಶಾಲೆಯಲ್ಲಿ ಪಡೆದರು. ಮೆಟ್ರಿಕ್ ಓದುತ್ತಿದ್ದಾಗ ಶಾಂತಿನಿಕೇತನಕ್ಕೆ ಹೋಗಿ ಬಂದರು. ಬರಹ ಮಾಡಿಯೇ ಬದುಕಿದವರು ಅನಕೃ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಕಥಾಂಜಲಿ, ಬಾಂಬೆ ಕ್ರಾನಿಕಲ್, ವಿಶ್ವವಾಣಿ ಪತ್ರಿಕೆಗಳನ್ನು ...

READ MORE

Related Books