ಉದ್ದಾನೇಶ ಚರಿತ್ರೆ

Author : ಚನ್ನಪ್ಪ ಎರೇಸೀಮೆ

Pages 490

₹ 75.00




Year of Publication: 1993
Published by: ಚಿಕ್ಕಪೇಟೆ ಗೌರಮ್ಮ ವಿದ್ಯಾರ್ಥಿನಿಲಯ
Address: ಚಿಕ್ಕಪೇಟೆ ಬೆಂಗಳೂರು , 560053

Synopsys

ಉದ್ದಾನೇಶ ಚರಿತ್ರೆ ಎಂಬ ಪುಸ್ತಕವು ಚನ್ನಪ್ಪ ಎರೇಸೀಮೆ ಅವರ ಕೃತಿಯಾಗಿದೆ. ಈ ಕೃತಿಯಲ್ಲಿ ಶ್ರೀ ಸಿದ್ದಗಂಗಾಕ್ಷೇತ್ರವು ಭಾರತದಲ್ಲಿ ಇಂದು ಜ್ಞಾನ ವಿಜ್ಞಾನಗಳ ಒಂದು ಗಣನೀಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳ ಪವಿತ್ರ ಸ್ಥಳವೆಂದೂ, ಎಲ್ಲಕ್ಕೂ ಮಿಗಿಲಾಗಿ ವೀರಶೈವ ಪರಂಪರೆಯ ಮಹಾ ದಾಸೋಹ ಕ್ಷೇತ್ರವೆಂದೂ, ಸಮಸ್ತ ಮಾನವ ಸಂಸ್ಕೃತಿಯನ್ನು ಗೌರವಿಸುವ ಸ್ಥಾನವೆಂದೂ, ಪ್ರಖ್ಯಾತವಾಗಿ ದೇಶವಿದೇಶಗಳ ವಿಚಾರವಾದಿಗಳ ಗಮನ ಸೆಳೆದಿದೆ. ಈ ಕ್ಷೇತ್ರ ಸಮಸ್ತ ಜನಾಂಗದ ಅನುಕೂಲಕ್ಕಾಗಿ ಅನೇಕ ಮುಖದಲ್ಲಿ ರಚನಾತ್ಮಕ ಕಾರ್‍ಯ ಗೌರವದಲ್ಲಿ ತೊಡಗಿ ನವಭಾರತ ನಿರ್ಮಾಣ ಕಾರ್ಯದಲ್ಲಿ ಶಕ್ತಿಮೀರಿ ಶ್ರಮಿಸಿದೆ: ಶ್ರಮಿಸುತ್ತಿದೆ. ಎಂಬುದನ್ನು ಈ ಪುಸ್ತಕದಲ್ಲಿ ಹೊರತರಲಾಗಿದೆ.

About the Author

ಚನ್ನಪ್ಪ ಎರೇಸೀಮೆ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹರವಿ ಗ್ರಾಮದ ಚೆನ್ನಪ್ಪ ಎರೇಸೀಮೆ ಅವರು (1919) ಜನಿಸಿದರು. ಮುಲ್ಕಿ ಪರೀಕ್ಷೆ ಪಾಸಾದ ನಂತರ ಶಿಕ್ಷಕರಾದರು. ಕೀರ್ತನಾಕಾರ-ಪ್ರವಚನಾಕಾರರಾದರು. ನುಡಿ ಗಾರುಡಿಗ ಎಂದೇ ಪ್ರಖ್ಯಾತರು. ಶಿಕ್ಷಕ ತರಬೇತಿ ಕಾಲೇಜಿನಲ್ಲಿ 30 ವರ್ಷ ಕಾಲ ಬೋಧನೆ ನಂತರ ನಿವೃತ್ತರಾದರು. ತುಮಕೂರಿನ ಸಿದ್ಧಗಂಗಾ ಮಠದೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಮಠದ ಸಿದ್ಧಗಂಗಾ ಮಾಸಪತ್ರಿಕೆಯ ಸಂಪಾದಕರೂ ಆಗಿದ್ದರು. ಶ್ರೀ ಶಿವಕುಮಾರ ಸ್ವಾಮೀಜಿಯವರ ಪಟ್ಟಾಧಿಕಾರ ಮಹೋತ್ಸವ ವೇಳೆ ‘ಸಿದ್ಧಗಂಗಾ ಶ್ರೀ’ ಹಾಗೂ ವಜ್ರಮಹೋತ್ಸವ ವೇಳೆ ‘ದಾಸೋಹ ಸಿರಿ’ ಮಹಾಸಂಪುಟಗಳ ರಚನೆ-ಪ್ರಕಟಣೆಯಲ್ಲೂ ಮಹತ್ವದ ಪಾತ್ರ ವಹಿಸಿದ್ದರು. ಪ್ರಾಥಮಿಕ, ಪ್ರೌಢಶಿಕ್ಷಣ, ಪಿಯುಸಿ ...

READ MORE

Related Books