ಉದ್ಯೋಗಸಾರ

Author : ಎನ್. ಬಸವಾರಾಧ್ಯ

Pages 76

₹ 113.00




Year of Publication: 1973
Published by: ಕನ್ನಡ ಅಧ್ಯಯನ ಸಂಸ್ಥೆ
Address: ಗುಲ್ಬರ್ಗ ವಿಶ್ವವಿದ್ಯಾಲಯ, ಕಲಬುರ್ಗಿ

Synopsys

'ಉದ್ಯೋಗಸಾರ’ ಕೃತಿಯು ಎನ್.ಬಸವಾರಾಧ್ಯ ಅವರ ಗ್ರಂಥವಾಗಿದೆ. ಈ ಕೃತಿಯು ಸಂಸ್ಕೃತಿ, ಇತಿಹಾಸ, ಭಾಷಾಚರಿತ್ರೆ-ಇವುಗಳ ಸಮಗ್ರ ಅರಿವನ್ನು ಶಾಸ್ತ್ರೀಯವಾಗಿ ನೀಡುತ್ತದೆ. ಅಷ್ಟೇ ಅಲ್ಲದೇ, ಕೋಶ ಅಥವಾ ನಿಘಂಟುಗಳ ರಚನೆಗೆ, ಅವುಗಳ ಮೂಲಘಟಕಗಳಾದ ಶಬ್ದಗಳ ಅರ್ಥನಿರ್ಧಾರಕ್ಕೆ ಶಾಸ್ತ್ರೀಯವಾಗಿ ಸಂಪಾದಿಸಿದ ಸಾಹಿತ್ಯ ಕೃತಿಗಳು ಅನಿವಾರ್ಯವಾಗುತ್ತವೆ ಎಂಬುದನ್ನು ತಿಳಿಸುತ್ತದೆ. ಸಾಂಸ್ಕೃತಿಕ ಮತ್ತು ಐತಿಹಾಸಿಕ ಪುನರಚನೆಗೆ ಅಗತ್ಯವಾಗಿ ಬೇಕಾಗಿರುವ ಅನೇಕ ಗ್ರಂಥಗಳು ಇಂದಿಗೂ ಅನುಪಲಬ್ಧವಾಗಿವೆ. ಶಾಸನಗಳಲ್ಲಿ, ಅನ್ಯಕವಿಗಳ ಕೃತಿಗಳಲ್ಲಿ ಉಕ್ತವಾಗಿರುವುದರಿಂದ ಮಾತ್ರ ಹಲವು ಕವಿಗಳ ಮತ್ತು ಗ್ರಂಥಗಳ ಹೆಸರುಗಳು ತಿಳಿದುಬರುತ್ತವೆ. ಕಾವ್ಯ ಪ್ರಯೋಗ ಪರಿಣತಮತಿಗಳಾಗಿದ್ದ ಕನ್ನಡ ಜನತೆಯ ಬಳಿ ಒಂದು ಕಾಲದಲ್ಲಿ ಇವೆಲ್ಲ ಲಭ್ಯವಾಗಿದ್ದಿರಬೇಕು.

ನಾಡಿನ ಹಲವೆಡೆಗಳಲ್ಲಿ ಓಲೆಗರಿಯ ಸಾಹಿತ್ಯ ಅನೇಕ ಶತ ಮಾನಗಳವರೆಗೆ ತನ್ನ ವೈಭವವನ್ನು ಮೆರೆದಿತ್ತು. ಕಾವ್ಯಪಾರಾಯಣ ಸಾಂಸ್ಕೃತಿಕ ಜೀವನದ ಅಂಗವಾಗಿ ಪರಿಣಮಿಸಿತ್ತು. ಕಾಲಕ್ರಮದಲ್ಲಿ ದೇಶ ಕಾಲ ಪರಿಸರಗಳ ಪ್ರಭಾವ ದಿಂದ, ಜನತೆಯ ಅಜ್ಞಾನ, ಅಶ್ರದ್ಧೆ ಮತ್ತು ಔದಾಸೀನ್ಯಗಳ ಫಲವಾಗಿ ಅವು ಮೂಲೆ ಗುಂಪಾಗುತ್ತ ಬಂದು ಕೀಟಗಳಿಗೆ ಆಹಾರವಾಗತೊಡಗಿದವು. ಅವುಗಳನ್ನು ಸಂರಕ್ಷಿಸ ಲಾರದೆ ನದಿಯ ಪಾಲೋ ಬೆಂಕಿಯ ಪಾಲೋ ಮಾಡುತ್ತಿದ್ದ ಉದಾಹರಣೆಗಳೂ ಅಸಂಖ್ಯವಾಗಿವೆ. ಮತ್ತೆ ಕೆಲವೆಡೆಗಳಲ್ಲಿ ನವರಾತ್ರಿಯಂದು ಬೆಳಕುಕಂಡು, ಪೂಜಾರ್ಹ ವಾಗಿ, ಹಾಲುಂಡು ಮತ್ತೆ ಕತ್ತಲ ಕೋಣೆಯ ಮೂಲೆ ಸೇರಬೇಕಾದ ದುಃಸ್ಥಿತಿ ಒದಗಿ ಹಲವಾರು ಅಮೂಲ್ಯ ಪ್ರತಿಗಳು ಸ್ಪುಟಿತವಾಗಿ ಹೋಗಿವೆ ಎಂಬುವುದನ್ನು ತಿಳಿಸುತ್ತದೆ.

About the Author

ಎನ್. ಬಸವಾರಾಧ್ಯ
(20 February 1926 - 06 December 2013)

ಸಂಶೋಧಕ, ಲೇಖಕ ಎನ್. ಬಸವಾರಾಧ್ಯ ಅವರು ಮೂಲತಃ ಕೋಲಾರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ನಾರಸಿಂಹನಹಳ್ಳಿಯವರು. ನಂಜುಂಡಾರಾಧ್ಯ ಬಸವಾರಾಧ್ಯ ಇವರ ಕಾವ್ಯನಾಮ. 1926 ಫೆಬ್ರುವರಿ 20 ರಂದು ಜನಿಸಿದರು. ತಂದೆ ನಂಜುಂಡಾರಾಧ್ಯರು 3 ವರ್ಷಗಳ ಕಾಲ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಸುಮಾರು 6 ವರ್ಷ ಬಿ.ಎಂ.ಶ್ರೀ. ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದರು. ತಾಯಿ ಗಿರಿಜಮ್ಮ. ಗೌರಿಬಿದನೂರು ಹಾಗೂ ಬೆಂಗಳೂರಿನ ಶಿಕ್ಷಣ ಪಡೆದಿದ್ದ ಇವರು ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತದ ಪದವಿ ಪಡೆದರು. ಮೈಸೂರು ವಿಶ್ವವಿದ್ಯಾಲಯದ ಪ್ರಾಚ್ಯ ವಿದ್ಯಾ ಸಂಶೋಧನಾಲಯದಲ್ಲಿ ಸ್ನಾತಕ ವಿಶೇಷ ತಜ್ಞರಾಗಿ ವೃತ್ತಿಜೀವನ ಆರಮಭಿಸಿದ ಇವರು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟು ...

READ MORE

Related Books