ಉಜ್ರೆ ಈಶ್ವರ ಭಟ್

Author : ಸದಾನಂದ ನಾರಾವಿ

Pages 56

₹ 45.00




Year of Publication: 2017
Published by: ಕನ್ನಡ ಸಂಘ, ಕಾಂತಾವರ
Address: ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡ ಭವನ, ಕಾಂತಾವರ, ಅಂಚೆ-ಕಾಂತಾವರ-574129, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ
Phone: 8548933733

Synopsys

ವಕೀಲರಾಗಿ, ಜನಸಂಘದ ಸಕ್ರಿಯ ಕಾರ್ಯಕರ್ತರಾಗಿದ್ದ ಈಶ್ವರ ಭಟ್‌, ಆಗಿನ ಪ್ರಧಾನಿ ಇಂದಿರಾಗಾಂಧಿ ಅವರು ಭಾರತದ ಮೇಲೆ ಹೇರಿದ್ದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಹೋರಾಟ ಮಾಡಿದ್ದರು. ಕಾಸರಗೋಡು ಕರ್ನಾಟಕಕ್ಕೆ ಸೇರಬೇಕು ಎಂಬ ಅಭಿಪ್ರಾಯ ಹೊಂದಿದ್ದು, ಹೋರಾಟ ಕೂಡ ನಡೆಸಿದ್ದರು. ವಕೀಲರಾಗಿ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಅವರ ಜೀವನ-ಸಾಧನೆಯನ್ನು ಈ ಪುಸ್ತಕ ಕಟ್ಟಿಕೊಡುತ್ತದೆ. ಕಾಂತಾವರ ಕನ್ನಡ ಸಂಘದ ’ನಾಡಿಗೆ ನಮಸ್ಕಾರ’ ಸರಣಿಯ 199ನೇ ಪುಸ್ತಕವಿದು.

About the Author

ಸದಾನಂದ ನಾರಾವಿ

ಸದಾನಂದ ನಾರಾವಿಯವರು ಅಂಚೆ ಇಲಾಖೆಯಲ್ಲಿ 29 ವರ್ಷ ಸೇವೆಸಲ್ಲಿಸಿ ನಿವೃತ್ತರಾಗಿ ಪ್ರಸ್ತುತ ಕಾಂತಾವರ ಕನ್ನಡ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡ ಮತ್ತು ತುಳು ಭಾಷೆಗಳಲ್ಲಿ ಕತೆ, ಕವನ, ಲೇಖನಗಳನ್ನು ಬರೆಯುವ ಸದಾನಂದ ನಾರಾವಿಯವರು 'ಮುತ್ತುಮಲ್ಲಿಗೆ', 'ಸಂರಚನೆಯ ಸುತ್ತಮುತ್ತ' (ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಪುಸ್ತಕ ಪ್ರಶಸ್ತಿ ವಿಜೇತ ಕೃತಿ), 'ಉಜ್ರೆ ಈಶ್ವರ ಭಟ್', 'ಡಾ.ಕೆ, ಪ್ರಭಾಕರ ಆಚಾರ್' ಮುಂತಾದ ಕೃತಿಗಳನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನ ವಿಶ್ವೇಶ್ವರಯ್ಯ ಪ್ರಶಸ್ತಿ, ತುಳು ಕತೆಯೊಂದಕ್ಕೆ ತುಳು ಒಕ್ಕೂಟದ ಪ್ರಥಮ ಬಹುಮಾನ ಇತ್ಯಾದಿ ಗೌರವಗಳಿಗೆ ಪಾತ್ರರಾಗಿದ್ದಾರೆ. ತುಳು ಭಾಷೆ ಹಾಗೂ ಸಂಸ್ಕೃತಿಗೆ ಸದಾನಂದ ನಾರಾವಿಯವರ ...

READ MORE

Related Books