ಉರಿದು ಹೋದ ಕನಸುಗಳು

Author : ಸಂಧ್ಯಾ ಶರ್ಮ ವೈ.ಕೆ

Pages 76

₹ 100.00




Year of Publication: 2004
Published by: ಅಭಿನವ ಪ್ರಕಾಶನ
Address: ನಂ.365,11ನೇ ಕ್ರಾಸ್, 2ನೇ ಬ್ಲಾಕ್, ಜಯನಗರ, ಬೆಂಗಳೂರು- 560 011
Phone: 08026564469

Synopsys

ಲೇಖಕಿ ಸಂಧ್ಯಾ ಶರ್ಮ ವೈ.ಕೆ ಅವರ ಕವನ ಸಂಕಲನ ಉರಿದು ಹೋದ ಕನಸುಗಳು. ಸುಮತೀಂದ್ರ ನಾಡಿಗ್ ಅವರು ಈ ಕೃತಿಗೆ ಮುನ್ನುಡಿಯ ಮಾತುಗಳನ್ನು ಬರೆದಿದ್ದಾರೆ. ಕೃತಿಯ ಪರಿವಿಡಿಯಲ್ಲಿ ಉರಿದು ಹೋದ ಕವನಗಳು, ಇದು ಬೊಂಬೆಯಾಟವಯ್ಯ, ಗೋಮಡಾರಣ್ಯ, ಸಂತೃಪ್ತೆ, ಭಯ, ಎಂಥ ಚೆಂದ, ಕನಸು-ನನಸು, ಚೈತ್ರ, ಹುಸಿ ಅಂಕ, ಗಾರುಡಿ, ಕಥೆ-ವ್ಯಥೆ, ಕಣ್ಣಾಮುಚ್ಚಾಲೆ, ಪಾತಳಿ, ವಿಪರ್‍ಯಾಸ, ಭಗ್ನಪ್ರೇಮಿ, ನಿರೀಕ್ಷೆ, ಅದಲು-ಬದಲು ಸೇರಿದಂತೆ ಅನೇಕ ಶೀರ್ಷಿಕೆಗಳ ಕವನಗಳಿವೆ.

About the Author

ಸಂಧ್ಯಾ ಶರ್ಮ ವೈ.ಕೆ
(01 June 1955)

ಕಳೆದ 52 ವರ್ಷಗಳಿಂದ ಕನ್ನಡ ಸಾರಸ್ವತಲೋಕದಲ್ಲಿ ಜನಪ್ರಿಯ ಲೇಖಕಿಯಾಗಿ  ಖ್ಯಾತಿ ಪಡೆದಿರುವ ವೈ.ಕೆ.ಸಂಧ್ಯಾ ಶರ್ಮ ಅವರು ವೈ.ಕೆ. ಕೇಶವಮೂರ್ತಿ ಮತ್ತು ವೈ.ಕೆ. ಅಂಬಾಬಾಯಿಯವರ ಪುತ್ರಿಯಾಗಿ ಬೆಂಗಳೂರಿನಲ್ಲಿ ಜನಿಸಿದರು. ಪ್ರೌಢಶಾಲೆಯಲ್ಲಿದ್ದಾಗಲೇ ಬರವಣಿಗೆ ಆರಂಭಿಸಿದ ಇವರು, ಬೆಂಗಳೂರಿನ ಕರ್ನಾಟಕ ವಾರ್ತಾ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಫ್ರೀಲಾನ್ಸ್ ಜರ್ನಲಿಸ್ಟ್ ಆಗಿ ವಿವಿಧ ಪತ್ರಿಕೆಗಳಲ್ಲಿ ನೃತ್ಯ-ನಾಟಕಗಳ ಕಲಾ ವಿಮರ್ಶಕಿಯಾಗಿ, ಅಂಕಣ ಬರಹಗಾರ್ತಿಯಾಗಿ ಕಾರ್ಯನಿರತರಾಗಿದ್ದಾರೆ. ಪ್ರಜಾಮತ ವಾರಪತ್ರಿಕೆ (1975-76) , ಪ್ರಜಾಪ್ರಭುತ್ವ  ವಾರಪತ್ರಿಕೆಗಳಲ್ಲಿ (1977-1980) ಮತ್ತು ಇಂಚರ (1980-82) ಮಾಸಪತ್ರಿಕೆಯಲ್ಲಿ ಸಹಾಯಕ ಸಂಪಾದಕಿಯಾಗಿ ಸೇವೆ ಸಲ್ಲಿಸಿರುವ ಅನುಭವ ಇವರಿಗಿದೆ. ಪ್ರಸ್ತುತ ಅಂತರ್ಜಾಲದ ‘’ ...

READ MORE

Related Books