ವಿ.ಕೃ. ಗೋಕಾಕ

Author : ಜೀವಿ (ಜಿ.ವಿ. ಕುಲಕರ್ಣಿ)

Pages 136

₹ 80.00




Year of Publication: 2011
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001
Phone: 7353530805 / 080 - 20161913

Synopsys

ವಿ.ಕೃ. ಗೋಕಾಕರು (ವಿನಾಯಕ ಕೃಷ್ಣ ಗೋಕಾಕ) ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳೆರಡರಲ್ಲಿಯೂ ವಿಫುಲವಾಗಿ ಸಾಹಿತ್ಯ ರಚನೆ ಮಾಡಿದವರು. ಕನ್ನಡ ಆಧುನಿಕ ಸಾಹಿತ್ಯ ನವೋದಯ ಚಳವಳಿಯಿಂದ ನವ್ಯಕ್ಕೆ ಹೊರಳುವಲ್ಲಿ ಅವರ ಪಾತ್ರವೂ ಮಹತ್ವದ್ದಾಗಿತ್ತು. ಕಾವ್ಯ, ನಾಟಕ, ಕಾದಂಬರಿ, ವಿಮರ್ಶೆ, ಪ್ರವಾಸಕಥನ, ಜೀವನಚರಿತ್ರೆ ಮೊದಲಾದ ಪ್ರಕಾರಗಳಲ್ಲಿ ಗಮನಾರ್ಹ ಕೃತಿಗಳನ್ನು ರಚಿಸಿದವರು. ಕನ್ನಡದ ಸ್ಥಾನಮಾನಗಳ ಬಗ್ಗೆ ಅವರು ನೀಡಿದ ವರದಿ ‘ಗೋಕಾಕ್ ವರದಿ‘ ಎಂದೇ ಪ್ರಸಿದ್ಧವಾಗಿದ್ದು, ಅದರಿಂದಾಗಿ ಕರ್ನಾಟಕದಲ್ಲಿ ಮನೆಮಾತಾಗಿದ್ದಾರೆ. ಕನ್ನಡದ ಹಿರಿಮೆಯನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ನೆಲೆಯಲ್ಲಿ ಎತ್ತಿಹಿಡಿದಿರುವ ಗೋಕಾಕರು 1960ರಲ್ಲಿ ತಮ್ಮ ‘ದ್ಯಾವಾ-ಪೃಥಿವೀ‘ ಕವನ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ, 1991ರಲ್ಲಿ ‘ಭಾರತ ಸಿಂಧು ರಶ್ಮಿ‘ಗಾಗಿ ಜ್ಞಾನಪೀಠ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ.

ವಿ.ಕೃ. ಗೋಕಾಕರ ಜೀವನ ಮತ್ತು ಸಾಧನೆಯನ್ನು ಪರಿಚಯಿಸುವ ಪ್ರಸ್ತುತ ಕೃತಿಯನ್ನು ರಚಿಸಿದವರು ಜೀವಿ ಕುಲಕರ್ಣಿ.

About the Author

ಜೀವಿ (ಜಿ.ವಿ. ಕುಲಕರ್ಣಿ)
(10 June 1937)

  ಮೂಲತಃ ವಿಜಯಪುರ ಜಿಲ್ಲೆಯ ಡೊಮನಾಳ ಗ್ರಾಮದವರಾದ ಡಾ. ಜಿ.ವಿ.ಕುಲಕರ್ಣಿ ಕವಿ, ನಾಟಕಕಾರ, ವಿಮರ್ಶಕ. ’ಜೀವಿ’ ಎಂಬ ಕಾವ್ಯ ನಾಮದಿಂದ ಬರೆಯುವ ಅವರು ಶಾಲಾ-ಕಾಲೇಜಿನ ದಿನಗಳಿಂದಲೂ 'ಮೆರಿಟ್ ಸ್ಕಾಲರ್ಶಿಪ್' ಪಡೆಯುತ್ತಿದ್ದ ವಿದ್ಯಾರ್ಥಿ. 'ಫೆಲೋಶಿಪ್' ಪಡೆದೇ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ (ಎಂ.ಎ) ಕನ್ನಡ ಹಾಗೂ ಸಂಸ್ಕೃತ ಬಿ.ಎ. ಪದವಿಗಳನ್ನು ಗಳಿಸಿದರು. ನಂತರ, ಕರ್ನಾಟಕ ವಿಶ್ವವಿದ್ಯಾಲಯದಿಂದ ಎಲ್.ಎಲ್.ಬಿ ಪದವಿ ಪೂರ್ಣಗೊಳಿಸಿ ಮುಂಬೈಗೆ ತೆರಳಿದರು. ಮುಂಬಯಿ ವಿಶ್ವವಿದ್ಯಾಲಯದಿಂದ ಆಂಗ್ಲ ಭಾಷೆಯಲ್ಲಿ ಎಂ.ಎ, ಪಿಎಚ್.ಡಿ ಪಡೆದರು. ಬೊಂಬಾಯಿ ನಗರದ ಖಾಲ್ಸಾ ಮತ್ತು ಡಹಣೂಕರ್ ಚೀನಾಯ್ ಕಾಲೇಜುಗಳಲ್ಲಿ ಕನ್ನಡ-ಇಂಗ್ಲೀಷ್ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ ...

READ MORE

Related Books