ವಚನ ಚಳವಳಿ

Author : ಬಸವರಾಜ ಸಬರದ

Pages 194

₹ 150.00




Year of Publication: 2020
Published by: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು
Address: ಜಗದ್ಗುರು ಶ್ರೀ ಶಿವರಾತ್ರೀಶ್ವರ ವೃತ್ತ, 1ನೇ ಮುಖ್ಯರಸ್ತೆ, 8ನೇ ವಿಭಾಗ, ಜಯನಗರ, ಬೆಂಗಳೂರು- 70

Synopsys

‘ವಚನ ಚಳವಳಿ’ ಲೇಖಕ ಡಾ. ಬಸವರಾಜ ಸಬರದ ಅವರ ಲೇಖನ ಸಂಕಲನ. ಈ ಕೃತಿಗೆ ಲೇಖಕ, ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಅವರ ಬೆನ್ನುಡಿ ಬರಹವಿದೆ. ಕೃತಿಯ ಕುರಿತು ಬರೆಯುತ್ತಾ ಡಾ. ಬಸವರಾಜ ಸಬರದ ಅವರ ವಚನ ಚಳವಳಿ ಒಳಗೊಂಡಿರುವ ಲೇಖನಗಳು ವಚನ ಸಾಹಿತ್ಯವನ್ನು ಒಂದು ಹೊಸ ಆಯಾಮದಲ್ಲಿ ಕಾಣುವ ಬಹು ಒಳ್ಳೆಯ ಪ್ರಯತ್ನವಾಗಿದೆ ಎಂದಿದ್ದಾರೆ. ಜೊತೆಗೆ ಜನಪರ, ಶೋಷಣೆ, ಸಾಮಾಜಿಕ ಪ್ರತಿಭಟನೆ ಇಂತಹ ಪರಿಭಾಷೆಯನ್ನು ಸೃಷ್ಟಿಸುತ್ತಾ ಕನ್ನಡ ಸಾಹಿತ್ಯಕ್ಕೆ ಹೊಸ ದಿಕ್ಕನ್ನು ಕಾಣಿಸುತ್ತಿರುವ ಇಂದಿನ ದಲಿತ-ಬಂಡಾಯ ಸಾಹಿತ್ಯದ ವಿಮರ್ಶೆಯ ಚೌಕಟ್ಟಿನಲ್ಲಿ ಮೂಡಿಬಂದಿರುವ ಇಲ್ಲಿನ ಲೇಖನಗಳು ಓದುಗರ ವಚನ ಸಾಹಿತ್ಯ ಗ್ರಹಿಕೆಗೆ ಹೆಚ್ಚಿನ ಅರ್ಥವಂತಿಕೆಯನ್ನು ತಂದುಕೊಡುವಷ್ಟು ಬೆಲೆ ಬಾಳುವಂಥವಾಗಿವೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books