ವಚನ ವಿನ್ಯಾಸ

Author : ಗಿರಡ್ಡಿ ಗೋವಿಂದರಾಜ

Pages 120

₹ 90.00




Year of Publication: 2013
Published by: ಮನೋಹರ ಗ್ರಂಥ ಮಾಲಾ
Address: ಲಕ್ಷ್ಮೀ ಭವನ, ಸುಭಾಷ್ ರೋಡ್, ಧಾರವಾಡ-580001

Synopsys

ಖ್ಯಾತ ವಿಮರ್ಶಕ ಡಾ. ಗಿರಡ್ಡಿ ಗೋವಿಂದರಾಜ ಅವರ ಕೃತಿ-ವಚನ ವಿನ್ಯಾಸ. ವಚನಗಳು ಸಾಹಿತ್ಯವೇ ಅಲ್ಲ ಎಂಬ ಪೂರ್ವಗ್ರಹ ಪೀಡಿತ ಮನಸುಗಳಿಗೆ ಈ ಕೃತಿಯು ನೇರ ಉತ್ತರ ನೀಡುತ್ತದೆ. ವಚನಗಳಲ್ಲಿಯ ಸಾಹಿತ್ಯಕ ಅಂಶಗಳನ್ನು ತೆರೆದು ತೋರಿಸಿದೆ ಇಲ್ಲಿಯ ಬರೆಹಗಳೂ. ಧಾರ್ಮಿಕ, ಸಾಹಿತ್ಯಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿಯೂ ಮುಖ್ಯ ಎಂಬ ಅಂಶ ಕಾಣಬಹುದು. ವಚನಗಳ ರಚನೆ ಕುರಿತ ವಿಶ್ಲೇಷಣೆಯೂ ಸಮರ್ಥವಾಗಿ ಮೂಡಿಬಂದಿದೆ. ಕನ್ನಡ ಕಾವ್ಯಾಭ್ಯಾಸಕ್ಕೆ ಹೊಸ ಆಯಾಮಗಳನ್ನು ನೀಡಿದೆ. ಸಾಹಿತ್ಯದ ವಿದ್ಯಾರ್ಥಿ ಹಾಗೂ ವಿಮರ್ಶೆ ಲೋಕಕ್ಕೆ ಈ ಕೃತಿಯು ಉತ್ತಮ ಆಕರ ಗ್ರಂಥವಾಗಿದೆ.

About the Author

ಗಿರಡ್ಡಿ ಗೋವಿಂದರಾಜ
(22 September 1939 - 11 May 2018)

ಖ್ಯಾತ ವಿಮರ್ಶಕ ಗಿರಡ್ಡಿ ಗೋವಿಂದರಾಜ ಅವರು ಮೂಲತಃ ಧಾರವಾಡ ಜಿಲ್ಲೆಯ ಅಬ್ಬಿಗೇರಿಯವರು. ತಂದೆ ಅಂದಾನಪ್ಪ ಮತ್ತು ತಾಯಿ ನಾಗಮ್ಮ. ಕನ್ನಡ ಮತ್ತು ಇಂಗ್ಲಿಷ್‌ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್‌ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಸಣ್ಣಕತೆ-ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. ಇಂಗ್ಲೆಂಡ್, ಬೆಲ್ಸಿಯಂ, ಫ್ರಾನ್ಸ್, ಸರೆಂಡ್, ಇಟಲಿಗಳಲ್ಲಿ ಉಪನ್ಯಾಸ ನೀಡಿರುವ ಅವರು ಇಂಗ್ಲಿಷ್‌ ಸ್ಟಡೀಸ್ ನಲ್ಲಿ ಡಿಪ್ಲಮೊ ಪಡೆದು ಕಲಬುರ್ಗಿಯ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿದ್ದರು. ಬ್ರಿಟಿಷ್ ಕೌನ್ಸಿಲ್ ವಿದ್ಯಾರ್ಥಿ ವೇತನ ಪಡೆದು  ಇಂಗ್ಲೆಂಡಿಗೆ ಭಾಷಾ ವಿಜ್ಞಾನದಲ್ಲಿ ವಿಶೇಷ ಅಧ್ಯಯನ ನಡೆಸಿದರು. ಅವರು ಹೈಸ್ಕೂಲಿನಲ್ಲಿರುವಾಗಲೇ 'ಶಾರದಾಲಹರಿ' ಎಂಬ ನೀಳ್ಗವಿತೆ ಪ್ರಕಟಿಸಿದ್ದರು. ನಾಟಕ ಅಕಾಡೆಮಿಯ ಫೆಲೋಶಿಪ್ ದೊರೆತಿರುವ ...

READ MORE

Related Books