ವಚನದಿಂದ ಆಯ್ದ ಸಾಲುಗಳ ಓದು

Author : ಸಿ.ಪಿ. ನಾಗರಾಜ

Pages 218

₹ 180.00




Year of Publication: 2021
Published by: ನಾಗು ಸ್ಮಾರಕ ಪ್ರಕಾಶನ
Address: 75, ‘ಎ’ ಬ್ಲಾಕ್, 5ನೇಯ ಕ್ರಾಸ್, ಕ್ರಿಶ್ಣ ಗಾರ್ಡನ್. ಆರ್.ವಿ.ಕಾಲೇಜು ಪೋಸ್ಟ್, ಬೆಂಗಳೂರು - 560059
Phone: 9986347521

Synopsys

ಬರಹಗಾರ ಸಿ.ಪಿ.ನಾಗರಾಜ ಅವರ ಕೃತಿ ‘ವಚನದಿಂದ ಆಯ್ದ ಸಾಲುಗಳ ಓದು’. ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪನವರು 'ವಚನಕಾರರ ವಿಚಾರ ಕ್ರಾಂತಿ' ಎಂಬ ಬರಹದಲ್ಲಿ ಹೇಳಿರುವ ಕೆಲವು ನುಡಿಗಳನ್ನು ಮುನ್ನುಡಿಯ ರೂಪದಲ್ಲಿ ಬಳಸಿಕೊಳ್ಳಲಾಗಿದೆ. ಲೇಖಕರ ಮಾತಿನಲ್ಲಿ ’ಶಿವಶರಣಶರಣೆಯರ ವಚನಗಳನ್ನು ಓದುತ್ತಿದ್ದಾಗ, ನನಗೆ ಮೆಚ್ಚುಗೆಯಾದ ವಚನದ ಕೆಲವು ಸಾಲುಗಳನ್ನು ಓದುಗರ ಗಮನಕ್ಕೆ ತರಬೇಕೆಂಬ ಆಸೆಯಾಯಿತು. ವಚನಗಳನ್ನು ಮೊದಲ ಬಾರಿ ಓದುವವರಿಗೆ ನೆರವಾಗಲೆಂಬ ಉದ್ದೇಶದಿಂದ ಪದಗಳನ್ನು ಬಿಡಿಸಿ ಬರೆದು, ಪದಗಳ ತಿರುಳನ್ನು ತಿಳಿಸಿ, ವಚನದ ಸಾಲುಗಳ ಇಂಗಿತವನ್ನು ನಾಲ್ಕಾರು ವಾಕ್ಯಗಳಲ್ಲಿ ವಿವರಿಸಿ ಗುರುಗಳಾದ ಕೆ.ವಿ.ನಾರಾಯಣ ಅವರಿಗೆ ತೋರಿಸಿದೆನು. ಅದನ್ನು ನೋಡಿದ ಅವರು “ಹೊಸ ತಲೆಮಾರಿನ ಓದುಗರಿಗೆ ಈ ರೀತಿಯ ಬರಹ ಉಪಯೋಗಕ್ಕೆ ಬರಬಹುದು. ಇದನ್ನು ಮುಂದುವರಿಸಿ” ಎಂದು ಸಲಹೆಯನ್ನು ನೀಡಿ, ನನ್ನ ಬರವಣಿಗೆಗೆ ಮಾರ್ಗದರ್ಶನವನ್ನು ಮಾಡಿದರು’ ಎಂಬುದಾಗಿ ಹೇಳಿಕೊಂಡಿದ್ದಾರೆ.

ಕೃತಿಯ ಪರಿವಿಡಿಯಲ್ಲಿ ಅಂಬಿಗರ ಚೌಡಯ್ಯ, ಅಕ್ಕಮಹಾದೇವಿ, ಅಕ್ಕಮ್ಮ, ಅಮುಗೆ ರಾಯಮ್ಮ, ಅಲ್ಲಮ, ಆದಯ್ಯ, ಆಯ್ದಕ್ಕಿ ಲಕ್ಕಮ್ಮ, ಗಜೇಶ ಮಸಣಯ್ಯ, ಗುಪ್ತ ಮಂಚಣ್ಣ, ಚಂದಿಮರಸ, ಚೆನ್ನಬಸವಣ್ಣ, ತೋಂಟದ ಸಿದ್ಧಲಿಂಗ ಶಿವಯೋಗಿ, ದೇಶಿಕೇಂದ್ರ ಸಂಗಮ ಬಸವಯ್ಯ, ನಗೆಯ ಮಾರಿತಂದೆ, ಬಸವಣ್ಣ, ಭೋಗಣ್ಣ ಸೇರಿ 24 ವಚನಕಾರರ ವಚನಗಳ ಪದಗಳನ್ನು ಬಿಡಿಸಿ ಬರೆದು, ಪದಗಳ ತಿರುಳನ್ನು ತಿಳಿಸಿ, ವಚನದ ಸಾಲುಗಳ ಇಂಗಿತವನ್ನು ನಾಲ್ಕಾರು ವಾಕ್ಯಗಳಲ್ಲಿ ಬರೆಯಲಾಗಿದೆ.

About the Author

ಸಿ.ಪಿ. ನಾಗರಾಜ

ಬರಹಗಾರ ಸಿ.ಪಿ ನಾಗರಾಜು ಅವರು 1945ರಲ್ಲಿ ಪುಟ್ಟೇಗೌಡ-ಲಕ್ಷ್ಮೀ ದೇವಮ್ಮ ದಂಪತಿಯ ಮಗನಾಗಿ ಜನಿಸಿದರು. ಎಂ.ಎ, ಪಿಎಚ್.ಡಿ ವ್ಯಾಸಂಗ ಮಾಡಿ ಸ್ತುತ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುದ್ರಿತ ನಾಟಕ ಕೃತಿಗಳು: ಭಾಗೀರಥಿ, ಅಂಬೆ, ಹಾವು, ಅಂಗಿಬಟ್ಟೆ, ಒಂದು ರೂಪಾಯಿ, ಕಳ್ಳರಿದ್ದಾರೆ ಎಚ್ಚರಿಕೆ, ಹೆಣದ ಹಣ, ಮೂರು ಸಾಮಾಜಿಕ ನಾಟಕಗಳು. ಮುದ್ರಿತ ಗದ್ಯ ಕೃತಿಗಳು: ಕರಿಯನ ಪುರಾಣ, ಕನಕನ ಅವ್ವ, ಹಳ್ಳಿಗಾಡಿನ ರೂವಾರಿ, ಡಾ.ಬಂದೀಗೌಡ, ಆಣೆ ಪ್ರಮಾಣಗಳು, ಬಯ್ಗುಳ, ಸರ್ವಜ್ಞ ವಚನಗಳ ಓದು, ಅಲ್ಲಮ ವಚನಗಳ ಓದು, ಶಿವಶರಣೆಯರ ವಚನಗಳ ಓದು, ಶಿವಶರಣರ ವಚನಗಳ ಓದು, ಬಸವಣ್ಣನ ...

READ MORE

Related Books