ವಚನಗಳಲ್ಲಿ ವ್ಯಕ್ತಿತ್ವ ವಿಕಾಸ

Author : ಬಸವರಾಜ ಸಬರದ

Pages 34

₹ 10.00




Year of Publication: 2004
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ, ವಿದ್ಯಾರಣ್ಯ- 583276

Synopsys

‘ವಚನಗಳಲ್ಲಿ ವ್ಯಕ್ತಿತ್ವ ವಿಕಾಸ’ ಡಾ. ಬಸವರಾಜ ಸಬರದ ಅವರ ಲೇಖನ ಸಂಕಲನ. ಕೃತಿಯ ಕುರಿತು ಬರೆಯುತ್ತಾ ಶರಣರ ಸತ್ವಯುತ ವಚನಗಳು ವ್ಯಕ್ತಿತ್ವದ ಪ್ರಾಮಾಣಿಕ ಪ್ರತಿಬಿಂಬಗಳಂತೆ, ದಿನನಿತ್ಯದ ಬದುಕಿನಲ್ಲಿ ಪಾರಮಾರ್ಥಿಕ ಶಕ್ತಿಯನ್ನು ತುಂಬಿದವು. ಅಂತೆಯೇ, ವೈಚಾರಿಕ ನಿಲುವನ್ನು ಸದೃಢಗೊಳಿಸಿದುವು. ಜಳ್ಳನ್ನು ತೂರಿ, ಗಟ್ಟಿ ಕಾಳನ್ನು ತನ್ನದನ್ನಾಗಿಸಿಕೊಳ್ಳುವ ಹೊಸ ದೃಷ್ಟಿಯನ್ನು ಅವು ನೀಡಿದವು. ಪೂರ್ಣತೆಯತ್ತ ಸಾಗುವ ಅಂತರಂಗದ ಅಭೀಪ್ಸೆಗೆ ಸಾಧನಮಾರ್ಗವಾದುವು. ಚೈತನ್ಯ ಜೀವನಾಡಿಗಳಾಗಿ ಸಾರ್ವಕಾಲಿಕ ಮೌಲ್ಯಗಳನ್ನು ಬಿತ್ತರಿಸಿದವು. ಈ ಎಲ್ಲಾ ಅನುಭಾವ ಸಾಹಿತ್ಯದ ಚಿರಂತನ ಸತ್ಯ ಮತ್ತು ಅವು ವ್ಯಕ್ತಿತ್ವ ವಿಕಸನದ ಮೇಲೆ ಬೀರಿದ ಪ್ರಭಾವದ ಕುರಿತು ಇಲ್ಲಿನ ಲೇಖನಗಳಲ್ಲಿ ಚರ್ಚಿಸಲಾಗಿದೆ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books