ಕನ್ನಡದ ಪ್ರಮುಖ ಲೇಖಕಿಯರಲ್ಲಿ ಒಬ್ಬರಾದ ಜಾನಕಿ ಶ್ರೀನಿವಾಸ ಮೂರ್ತಿ ಅವರು ತಮ್ಮ ಕಾವ್ಯನಾಮ ವೈದೇಹಿ ಹೆಸರಿನಿಂದ ಚಿರಪರಿಚಿತರು. ಅವರು ಬರೆದಿರುವ ಸಮಗ್ರ ಕಥೆಗಳನ್ನು ಒಟ್ಟುಗೂಡಿಸಿ ಹೊರತರಲಾದ ಹೊತ್ತಿಗೆ ’ವೈದೇಹಿ ಕಥೆಗಳು.’
ಮರಗಿಡ ಬಳ್ಳಿ, ಅಂತರಂಗದ ಪುಟಗಳು, ಗೋಲ, ಸಮಜಶಾಸ್ತಜ್ಞೆಯ ಟಿಪ್ಪಣಿಗೆ, ಅಮ್ಮಚ್ಚಿಯೆಂಬ ನೆನಪು, ಕ್ರೌಂಚ ಪಕ್ಷಿಗಳು, ಕತೆ ಕತೆ ಕಾರಣ, ವೈದೇಹಿಯವರ 1979 ರಿಂದ 2016 ರವರೆಗಿನ ಅವರ ಕಥೆಗಳು ಬಹುಮುಖ್ಯ ಕಥಾ ಸಂಕಲನಗಳಾಗಿವೆ. ಪ್ರತಿಯೊಂದು ಕಥಾಸಂಕಲನದಲ್ಲಿಯೂ ಹಲವಾರು ಕಥೆಗಳನ್ನು ಒಳಗೊಂಡಿರುವ ಈ ಕೃತಿಯು ಸಾಹಿತ್ಯದ ವಿದ್ಯಾರ್ಥಿಗಳಿಗೆ, ಓದುಗರಿಗೆ, ಸಮಗ್ರ ರೂಪದಲ್ಲಿ ದೊರಕಿದೆ.
ಡಾ. ವೈದೇಹಿ ಅವರ ಮೂಲ ಹೆಸರು ಜಾನಕಿ ಶ್ರೀನಿವಾಸಮೂರ್ತಿ. ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಜನಿಸಿದ ಅವರು ಕಾವ್ಯ, ಪ್ರಬಂಧ, ಮಕ್ಕಳ ಸಾಹಿತ್ಯ, ಜೀವನಚಿತ್ರ, ಕೃತಿ ಸಂಪಾದನೆ ಪ್ರಕಾರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮಾನವ ಸಹಜ ಸಂಬಂಧಗಳು ಮತ್ತು ಹೆಣ್ಣಿನ ಭಾವತರಂಗಗಳನ್ನು ಹಿಡಿದಿಡುವ ಕಥೆ-ಕಾದಂಬರಿ ರಚಿಸಿರುವ ಲೇಖಕಿ. ಮರಗಿಡಬಳ್ಳಿ ಅಂತರಂಗದ ಪುಟಗಳು ಸಮಾಜಶಾಸ್ತ್ರಜ್ಞೆಯ ಟಿಪ್ಪಣಿಗಳು, ಅಮ್ಮಚ್ಚಿ ಎಂಬ ನೆನಪು. ಕತೆ ಕತೆ ಕಾರಣ (ಕಥಾ ಸಂಕಲನಗಳು), ಅಲೆಗಳಲ್ಲಿ ತರಂಗ (ಸಮಗ್ರ ಕಥಾ ಸಂಕಲನ), ಬಿಂದು ಬಿಂದಿಗೆ, ಪಾರಿಜಾತ ಹೂವ ಕಟ್ಟುವ ಕಾಯಕ (ಕವನ ಸಂಕಲನ), ಅಸ್ಪೃಶ್ಯರು (ಕಾದಂಬರಿ), ಮಲ್ಲಿನಾಥನ ಧ್ಯಾನ, ಮೇಜು ಮತ್ತು ...
READ MORE