ವೈದಿಕ ಧರ್ಮದಲ್ಲಿ ಆತ್ಮ ಮತ್ತು ಬ್ರಹ್ಮ

Author : ಹೆಚ್.ವಿ. ನಾಗರಾಜರಾವ್

Pages 70

₹ 10.00




Year of Publication: 2010
Published by: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560056
Phone: 080 - 23183311, 23183312

Synopsys

ಜಯಚಾಮರಾಜ ಒಡೆಯರ್ ಅವರಿಗೆ ಅದ್ವೈತ ತತ್ತ್ವಶಾಸ್ತ್ರದಲ್ಲಿದ್ದ ಪಾಂಡಿತ್ಯ, ಒಲವು ಪುಸ್ತಕವಾಗಿ ಹೊರಹೊಮ್ಮಿದೆ. ಮೋಕ್ಷದ ವಿಷಯದಲ್ಲಿ ಜ್ಞಾನಮಾರ್ಗಕ್ಕೆ ಹೆಚ್ಚಿನ ಒತ್ತುಕೊಟ್ಟು, ಮೀಮಾಂಸಕರ ವಾದವನ್ನು ತಳ್ಳಿಹಾಕುತ್ತಾರೆ. ಪೂಜ್ಯನೂ ಪೂಜಕನೂ ಒಂದೇ ಆಗುವುದೇ ನಿಜವಾದ ಪೂಜೆ ಮತ್ತು ಇದಕ್ಕೆ ಉಪನಿಷತ್ತುಗಳ ಮಹಾವಾಕ್ಯಗಳು ಸಹಾಯಮಾಡುತ್ತವೆ ಎಂಬುದನ್ನು ಅವರು ಪ್ರತಿಪಾದಿಸಿದ್ದಾರೆ. ಒಟ್ಟಿನಲ್ಲಿ ಒಂದು ಸಣ್ಣದಾದ ಪರಿಧಿಯಲ್ಲಿ ಮಹಾರಾಜರು ಅದ್ವೈತದ ದೃಷ್ಟಿಯಲ್ಲಿ ಆತ್ಮ ಮತ್ತು ಬ್ರಹ್ಮನನ್ನು ಕುರಿತು ಸರಳವಾಗಿ ಮತ್ತು ಅಷ್ಟೇ ಸ್ಪಷ್ಟವಾಗಿ ಪ್ರತಿಪಾದಿಸಿದ್ದಾರೆ. ಈ ಕೃತಿಯನ್ನು ಹೆಚ್.ವಿ.ನಾಗರಾಜ ರಾವ್ ರವರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.

About the Author

ಹೆಚ್.ವಿ. ನಾಗರಾಜರಾವ್
(10 September 1942)

ಸಂಸ್ಕೃತ ವಿದ್ವಾಂಸ ಹೆಚ್‌.ವಿ. ನಾಗರಾಜರಾವ್‌  ಮೂಲತಃ ಕೋಲಾರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ಯಲ್ಲಿ (10-9-1942) ಹುಟ್ಟಿದರು. ಎರಡೂವರೆ ವರ್ಷದ ಬಾಲಕರಿದ್ದಾಗಲೇ ತಂದೆಯನ್ನು ಕಳೆದುಕೊಂಡರು. ಅಜ್ಜನ ಮನೆಯಲ್ಲಿ ಬೆಳೆದರು. ಪ್ರೌಢಶಾಲೆಯ ವ್ಯಾಸಂಗದ ಬಳಿಕ ಬಟ್ಟೆಯ ಅಂಗಡಿಯಲ್ಲಿ ದುಡಿದರು. ವಿದ್ಯಾಗುರು ವಿದ್ವಾನ್‌ಎನ್‌.ವಿ. ಅನಂತರಾಮಯ್ಯನವರು ಇವರಿಗೆ ನೆರವಾಗುತ್ತಾರೆ. ಸಂಸ್ಕೃತ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಪರಿಣಿತರಾಗಿ ಮೈಸೂರಿಗೆ ಬಂದು ಸಂಸ್ಕೃತ ಮಹಾ ಪಾಠಶಾಲೆ ಸೇರಿ, ಅಲಂಕಾರ ಶಾಸ್ತ್ರಗಳನ್ನು ಕಲಿತರು.  ಮೈಸೂರು ವಿಶ್ವವಿದ್ಯಾಲಯದ ಸಂಸ್ಕೃತ ಎಂ. ಎ. ಪರೀಕ್ಷೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದರು.  ಇವರ ವ್ಯಾಕರಣ ಗುರು ವಿದ್ವಾನ್‌ ಸೋ. ರಾಮಸ್ವಾಮಿ ಅಯ್ಯಂಗಾರ್‌ ಅವರು ತಮ್ಮಲ್ಲಿ ಕಲಿಯಲು ಬಂದ ...

READ MORE

Related Books