ವೈಜ್ಞಾನಿಕ ದೃಷ್ಟಿಯನ್ನು ಬೆಳೆಸಿಕೊಳ್ಳುವುದು ಹೇಗೆ?

Author : ಜೆ.ಆರ್. ಲಕ್ಷ್ಮಣರಾವ್

Pages 96

₹ 54.00




Year of Publication: 2013
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 0802220358001

Synopsys

ವೈಜ್ಞಾನಿಕ ದೃಷ್ಟಿಯನ್ನು ರೂಢಿಸಿಕೊಳ್ಳುವುದು ಅಗತ್ಯ. ಪ್ರತಿಯೊಂದನ್ನು ವಿಚಾರಿಸಿ, ಪರಾಮರ್ಶಿಸಿ ವಿಷಯವನ್ನು ಒಪ್ಪಿಕೊಳ್ಳಬೇಕು. ಯಾರೋ ದೊಡ್ಡವರು ಹೇಳಿದ್ದಾರೆ ಅಥವಾ ದೊಡ್ಡ ಗ್ರಂಥದಲ್ಲಿ ಹೇಳಿದೆ ಎಂಬ ಕಾರಣಕ್ಕೆ ಯಾವುದೇ ಒಂದು ವಿಷಯವನ್ನು ಕುರುಡಾಗಿ ಒಪ್ಪಿಕೊಳ್ಳಬಾರದು. ಈ ನಿಟ್ಟಿನಲ್ಲಿ ಸಾಗುವ ಪ್ರತಿ ಹೆಜ್ಜೆಯೂ ವೈಜ್ಞಾನಿಕ ದೃಷ್ಟಿಕೋನದದಿಂದ ಕೂಡಿರುತ್ತದೆ. ವೈಜ್ಞಾನಿಕ ದೃಷ್ಟಿ ಇರದಿದ್ದರೆ ಕೇವಲ ಭಾವನಾತ್ಮಕ ನೆಲೆಯಲ್ಲಿ ಒಂದು ಸಂಗತಿಯನ್ನು ಒಪ್ಪಿಕೊಂಡಲ್ಲಿ ಅದರಿಂದ ವಂಚನೆಯಾಗುವುದೇ ಹೆಚ್ಚು. ವೈಜ್ಞಾನಿಕ ದೃಷ್ಟಿಎಂದರೇನು? ಅದನ್ನು ಬೆಳೆಸಿಕೊಳ್ಳುವ ಬಗೆಯ ಇತರೆ ಅಂಶಗಳನ್ನು ಈ ಕೃತಿಯಲ್ಲಿ ವಿವರವಾಗಿ ಚರ್ಚಿಸಲಾಗಿದೆ.

About the Author

ಜೆ.ಆರ್. ಲಕ್ಷ್ಮಣರಾವ್
(21 January 1921 - 29 December 2017)

ಜಗಳೂರು ರಾಘವೇಂದ್ರರಾವ್ ಲಕ್ಷ್ಮಣರಾವ್ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಜೆ.ಆರ್‌. ಲಕ್ಷ್ಮಣರಾವ್ ಎಂದೇ ಚಿರಪರಿಚಿತರು. 1921 ಜನವರಿ 21 ರಂದು ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಜನಿಸಿದರು. ತಂದೆ ರಾಘವೇಂದ್ರ ರಾವ್ ಮತ್ತು ತಾಯಿ ನಾಗಮ್ಮ. ಪ್ರಾಥಮಿಕ ವಿದ್ಯಾಭ್ಯಾಸ ಜಗಳೂರಿನಲ್ಲಿ ನಡೆಸಿದ ಅವರು  ಪ್ರೌಢ ಶಾಲೆಯ ಅಭ್ಯಾಸ ದಾವಣಗೆರೆಯಲ್ಲಿ ಪೂರ್ಣಗೊಳಿಸಿದರು. ಈಗ ಯುವರಾಜ ಕಾಲೇಜು ಎಂದು ಕರೆಯಲಾಗುವ ’ಮೈಸೂರಿನಲ್ಲಿ ಇಂಟರ್ ಮೀಡಿಯೆಟ್ ಕಾಲೇಜ್’ ಅಧ್ಯಯನ ಮುಂದುವರೆಸಿದ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ, ರಸಾಯನ ಶಾಸ್ತ್ರದಲ್ಲಿ ಎಮ್ಮೆಸ್ಸಿ ಪದವಿ ಪಡೆದರು. ತುಮಕೂರು ಇಂಟರ್ ಮೀಡಿಯೆಟ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯಾರಂಭ ಮಾಡಿದ ಅವರು ಬೆಂಗಳೂರಿನ ಸೇಂಟ್ರಲ್ ಕಾಲೇಜ್, ಶಿವಮೊಗ್ಗೆಯ ಸಹ್ಯಾದ್ರಿ ...

READ MORE

Related Books