ವೈಜ್ಞಾನಿಕ ಮನೋಧರ್ಮ

Author : ಜಿ.ಟಿ. ನಾರಾಯಣರಾವ್

Pages 149

₹ 135.00




Year of Publication: 2019
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580/01

Synopsys

ವಿಜ್ಞಾನ ಲೇಖಕ ಜಿ.ಟಿ.ನಾರಾಯಣರಾವ್ ಅವರು ಬರೆದ ಕೃತಿ ‘ವೈಜ್ಞಾನಿಕ ಮನೋಧರ್ಮ. ವಿಜ್ಞಾನ-ತಂತ್ರಜ್ಞಾನ ಬೆಳೆಯುತ್ತಿದೆ. ಅದರ ಜೊತೆಗೆ, ವೈಜ್ಞಾನಿಕ ಮನೋಭಾವವೂ ಬೆಳೆಯಬೇಕು. ತಪ್ಪಿದರೆ, ವಿಜ್ಞಾನದ ಬೆಳವಣಿಗೆಗೆ ಅರ್ಥವೇ ಇಲ್ಲದಂತಾಗುತ್ತದೆ. ವೈಜ್ಞಾನಿಕ ಮನೋಧರ್ಮದ ಬೆಳವಣಿಗೆ ಎಂದರೆ ಅದು ಮನುಷ್ಯನಿಗೆ ಇರಬೇಕಾದ ಸಾಮಾಜಿಕ ಜವಾಬ್ದಾರಿಯೇ ಆಗಿದೆ. ವೈಜ್ಞಾನಿಕ ಮನೋಧರ್ಮ ಎಂದರೆ ಏನು? ಸಾಮಾನ್ಯ ಮನೋಧರ್ಮಕ್ಕಿಂತ ಇದು ಹೇಗೆ ಭಿನ್ನ. ಸಾಮಾಜಿಕ ಜವಾಬ್ದಾರಿಗಳು ಇತ್ಯಾದಿ ಕುರಿತ ಚಿಂತನೆಗಳು ಲೇಖನ ರೂಪದಲ್ಲಿವೆ. ಇಲ್ಲಿಯ ಚಿಂತನೆಗಳಿಗೆ ಗೌರವವಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪುರಸ್ಕಾರ (1990) ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ "ಡಾ.ಎಚ್.ಎನ್. ದತ್ತಿನಿಧಿ ಪ್ರಶಸ್ತಿ ಲಭಿಸಿದೆ.

About the Author

ಜಿ.ಟಿ. ನಾರಾಯಣರಾವ್
(30 January 1926)

ಜಿ.ಟಿ.ನಾರಾಯಣ ರಾವ್ ಅವರು ಪುತ್ತೂರಿನ ಸಮೀಪದ ಮರಿಕೆ ಗ್ರಾಮದಲ್ಲಿ 30-01-1926ರಂದು ಜನಿಸಿದರು. ಮದ್ರಾಸ್ ವಿಶ್ವವಿದ್ಯಾಲಯದಿಂದ ಗಣಿತದಲ್ಲಿ ಎಂ.ಎ. ಪದವಿ ಪಡೆದಿರುವ ಇವರು ಎನ್.ಸಿ.ಸಿ. ಅಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಕರ್ನಾಟಕ ಸಂಗೀತ ಹಾಗೂ ಕನ್ನಡ ಅಭಿಜಾತ ವಾಙ್ಙಯ ಕುರಿತು ಅಪಾರ ಆಸಕ್ತಿ ಹೊಂದಿದ್ದಾರೆ, ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪನ ಮತ್ತೆ ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಶ್ವಕೋಶದ ವಿಜ್ಞಾನ ಸಂಪಾದಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಸಿ.ವಿ. ರಾಮನ್‌ರನ್ನು ಬೆಂಗಳೂರಿನಲ್ಲಿಯೂ, ಎಸ್. ಚಂದ್ರಶೇಖರ್‌ರನ್ನು ಚಿಕಾಗೋದಲ್ಲಿಯೂ ಭೇಟಿಮಾಡಿ ವೈಜ್ಞಾನಿಕ ಜೀವನ ಚರಿತ್ರೆಗಳನ್ನು ಬರೆದಿದ್ದಾರೆ. ಕನ್ನಡಕ್ಕೆ ವಿಪುಲ ಸ್ವತಂತ್ರ ವೈಜ್ಞಾನಿಕ ಕೃತಿಗಳನ್ನೂ, ಕೆಲವು ...

READ MORE

Related Books