ವೈಜ್ಞಾನಿಕ ನೆಲೆಯಲ್ಲಿ ಅಷ್ಟಾವರಣ

Author : ಬಾಲಚಂದ್ರ ಜಯಶೆಟ್ಟಿ

Pages 104

₹ 100.00




Year of Publication: 2013
Published by: ಅಖಿಲ ಭಾರತೀಯ ಶರಣ ಸಾಹಿತ್ಯ ಪರಿಷತ್
Address: ಮೈಸೂರು

Synopsys

ವೈಜ್ಞಾನಿಕ ನೆಲೆಯಲ್ಲಿ ಅಷ್ಠಾವರಣ-ಪ್ರೊ. ಭಾಲಚಂದ್ರ ಜಯಶೆಟ್ಟಿ ಅವರು ರಚಿಸಿದ್ದಾರೆ. ಲಿಂಗಾಯತ ಆಚರಣೆಯಲ್ಲಿ ಅಷ್ಟಾವರಣಕ್ಕೆ ಹೆಚ್ಚಿನ ಮಹತ್ವವಿದೆ. ಆದರೆ ಈ ಕೃತಿಯಲ್ಲಿ ಅಷ್ಟಾವರಣಗಳ ಕುರಿತು ಸಾಂಪ್ರದಾಯಿಕವಾಗಿ ಚರ್ಚಿಸದೇ  ವೈಜ್ಞಾನಿಕವಾಗಿ ಅವುಗಳ ಸಾಧನಾತ್ಮಕ ಪ್ರಭಾವ, ಪ್ರಕ್ರಿಯೆಗಳ ಕುರಿತು ಲೇಖಕರು ವಿವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೊಂದು ಶುದ್ಧ ವೈಜ್ಞಾನಿಕ ಕೃತಿಯಾಗಿದೆ.

About the Author

ಬಾಲಚಂದ್ರ ಜಯಶೆಟ್ಟಿ
(22 November 1939)

ಲೇಖಕ, ಅನುವಾದಕ ಭಾಲಚಂದ್ರ ಜಯಶೆಟ್ಟಿ ಅವರು ಮೂಲತಃ ಬೀದರ ಜಿಲ್ಲೆಯವರು. ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ  ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ರಾಜೇಶ್ವರ, ಬಸವಕಲ್ಯಾಣದಲ್ಲಿ ಪಡೆದರು. ಆನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಂ.ಎ ಪದವಿ ಪಡೆದರು. ಕನ್ನಡ, ಹಿಂದಿ, ಮರಾಠಿ ಭಾಷೆಗಳಲ್ಲಿ ಪ್ರಭುತ್ವ ಪಡೆದಿದ್ದ ಅವರು ಶಿಕ್ಷಣ ಇಲಾಖೆಯಲ್ಲಿ ವೃತ್ತಿಯನ್ನು ಆರಂಭಿಸಿದರು.  ಸರಕಾರಿ ಪದವಿ ಮಹಾವಿದ್ಯಾಲಯ ಯಾದಗಿರಿ, ಸರಕಾರಿ ಮಹಾವಿದ್ಯಾಲಯ ಗುಲಬರ್ಗಾ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೀದರ ಮುಂತಾದೆಡೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 1997ರಲ್ಲಿ ನಿವೃತ್ತಿಯಾದರು. ಹಲವಾರು ಶಿಕ್ಷಣ ಸಂಸ್ಥೆಗಳ ...

READ MORE

Related Books