ವರ್ತಮಾನ

Author : ಜಿ. ರಾಮಕೃಷ್ಣ

Pages 104

₹ 100.00

Buy Now


Year of Publication: 2019
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸ್ಸೆ ಸೆಂಟರ್‌. ಕ್ರೆಸೆಂಟ್‌ ರಸ್ತೆ. ಶಿವಾನಂದ ಸರ್ಕಲ್‌ ಹತ್ತಿರ, ಬೆಂಗಳೂರು-560001
Phone: 08022161900

Synopsys

ರಾಷ್ಟ್ರೀಯತೆ, ಸಂಸ್ಕೃತಿ, ಮನುಸ್ಮೃತಿ, ಭಗವದ್ಗೀತೆ...ಮುಂತಾದ ವಿಷಯಗಳ ಇಂದಿನ ಚರ್ಚಿತ ವಿಷಯಗಳ ಕುರಿತು ಪರ ವಿರೋಧದ ವಾದಗಳು, ವ್ಯಾಖ್ಯಾನಗಳು ಹಾಗೂ ವೈಭವೀಕರಣ ನಡೆಯುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಈ ವಿಷಯಗಳ ಬಗ್ಗೆ ಸತ್ಯಾಂಶಗಳು, ವಾಸ್ತವಾಂಶಗಳನ್ನು ವಿವರಿಸುವ ಪ್ರಯತ್ನದ ಭಾಗವಾಗಿ ಜಿ.ರಾಮಕೃಷ್ಣ ಅವರು ರಚಿಸಿರುವ ಕೃತಿ' ವರ್ತಮಾನ'.

’ಚರಿತ್ರೆಯ ಬೆಳಕಿನಲ್ಲಿ ವರ್ತಮಾನದ ಹೆಜ್ಜೆಗಳು’ ಎಂದಿರುವ ಲೇಖಕರು ಗತವನ್ನು ಕೆದಕಿ ಅದರೊಳಗಿದ್ದ ಸತ್ಯವನ್ನು, ಧರ್ಮಶಾಸ್ತ್ರಕ್ಕೆ ಸಂಬಂಧಿಸಿದ ನಮ್ಮ ಗ್ರಂಥಗಳು ಚರ್ಚೆಯ ದೃಷ್ಟಿಯಿಂದ ಏನ್ನನ್ನು ತಿಳಿಸುತ್ತವೆ ಎಂಬುದನ್ನು ವಿವರಿಸಿದ್ದಾರೆ. ಮೌರ್ಯರ ಕಾಲದ ಅರ್ಥಶಾಸ್ತ್ರದ ಕುರಿತು ಸುದೀರ್ಘವಾದ ಸಮಕಾಲೀನ ರಾಜಕೀಯ ಹಾಗೂ ಸಾಮಾಜಿಕ ಬೆಳವಣಿಗೆಯನ್ನು ಅರ್ಥಮಾಡಿಕೊಳ್ಳಲು ಸಹಕಾರಿಯಾದ ವಿಶ್ಲೇಷಣೆಯನ್ನು ಕೃತಿಯಲ್ಲಿ ನೀಡಲಾಗಿದೆ.

ಪ್ರಜಾಪ್ರಭುತ್ವಕ್ಕೆ ಆತಂಕಕಾರಿಯಾಗಿ ಪರಿಣಮಿಸಿರುವ ಇತ್ತೀಚಿನ ದಶಕಗಳಲ್ಲಿ ತಳ ಸಮುದಾಯ ಮತ್ತು ದುರ್ಬಲ ವರ್ಗದವರ ಮೇಲೆ ನಡೆಯುತ್ತಿರುವ ಶೋಷಣೆ ಬಗ್ಗೆ ವಿವರಿಸಲಾಗಿದೆ. ವರ್ತಮಾನದ ಹಲವಾರು ಗೊಂದಲಗಳನ್ನು ಪರಿಹರಿಸಲು ಸಮರ್ಥವಾಗಿರುವ ಮತ್ತು ಚರಿತ್ರೆಯ ಅಭ್ಯಾಸಕ್ಕೆ ಉಪಯುಕ್ತವಾದ ಕೃತಿ ಇದಾಗಿದೆ.

ಈ ಕೃತಿಗೆ ಕ.ಸಾ.ಪ ಕೊಡಮಾಡುವ 2019ನೇ ಸಾಲಿನ ಶ್ರೀಮತಿ ಗಂಗಮ್ಮ ಶ್ರೀ ಬಿ. ಶಿವಣ್ಣ ದತ್ತಿ ಪ್ರಶಸ್ತಿ ದೊರೆತಿದೆ.

About the Author

ಜಿ. ರಾಮಕೃಷ್ಣ

ಜಿ. ರಾಮಕೃಷ್ಣ ಸಂಸ್ಕೃತದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಮತ್ತು ಪಿಎಚ್.ಡಿ. ಪದವಿಗಳನ್ನೂ, ಪುಣೆ ಹಾಗೂ ವೇಲ್ ವಿಶ್ವವಿದ್ಯಾನಿಲಯಗಳಿಂದ ಇಂಗ್ಲಿಷ್‌ನಲ್ಲಿ ಎಂ.ಎ. ಪದವಿಗಳನ್ನೂ ಪಡೆದಿದ್ದಾರೆ. ಮಹಾಡಿನ ಡಾ.ಅಂಬೇಡ್ಕರ್ ಕಾಲೇಜು ಮತ್ತು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜುಗಳಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸುಮಾರು ಮೂವತ್ತು ವರ್ಷ ಕೆಲಸ ಮಾಡಿದ್ದಾರೆ, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿದ್ದುಕೊಂಡು “ಭಾರತೀಯ ವಿಜ್ಞಾನದ ಹಾದಿ” ಎಂಬ ಮೌಲಿಕ ಕೃತಿಯನ್ನು ರಚಿಸಿದ್ದಾರೆ. ಇವರ “ಮುನ್ನೋಟ' ಹಾಗೂ 'ಆಯತನ' ಗ್ರಂಥಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಲಭ್ಯವಾಗಿದೆ. ಮಾರ್ಕ್ಸ್‌ವಾದಿ ಅಧ್ಯಯನಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಭಗತ್‌ಸಿಂಗ್, ಚೆ ಗೆವಾರಾ, ...

READ MORE

Related Books