ವತ್ಸಲೆ

Author : ಗೊರೂರು ರಾಮಸ್ವಾಮಿ ಅಯ್ಯಂಗಾರ್

Pages 133

₹ 1.00




Year of Publication: 1950
Published by: ಮಾರುತಿ ಪುಸ್ತಕ ಮಂದಿರ

Synopsys

ದೇಶದ ಸ್ವಾತಂತ್ಯ್ರಕ್ಕಾಗಿ ಲೇಖಕ ಗೊರೂರು ರಾಮಸ್ವಾಮಿ ಅಯ್ಯಂಗಾರರು ಜೈಲಿಗೆ ಹೋದಾಗ ಅಲ್ಲಿದ್ದುಕೊಂಡೇ ಬರೆದ ಕಥೆಗಳಿವು. ಮಲ್ಲಿಗೆವಾಳು ರಂಗಪ್ಪನವರು, ಭಾಗ್ಯಲಕ್ಷಮ್ಮನವರ ತ್ಯಾಗ, ಲಗ್ನಪತ್ರಿಕೆಯ ಸಮಾರಂಭ, ವತ್ಸಲೆಯ ದರ್ಶನ, ಎರಡು ಜತೆ, ಎರಡು ಮಾದರಿ, ಹಳ್ಳಿಯಲ್ಲಿ ಬಣ್ಣದ ಬೀಸಣಿಗೆ, ಆತ್ರು ಯಾರು ಮಿತ್ರ ಯಾರು ಹೀಗೆ ಒಟ್ಟು 11 ಕಥೆಗಳನ್ನು ಇಲ್ಲಿ ಸಂಕಲಿಸಲಾಗಿದೆ. ಪ್ರತಿ ಕಥೆಯು ವಸ್ತು ವೈವಿಧ್ಯತೆಯಿಂದ ಕಂಗೊಳಿಸುತ್ತವೆ.

About the Author

ಗೊರೂರು ರಾಮಸ್ವಾಮಿ ಅಯ್ಯಂಗಾರ್
(04 July 1904 - 28 September 1991)

ಗಾಂಧಿವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ಜನಪ್ರಿಯ ಸಾಹಿತಿಗಳಲ್ಲಿ ಒಬ್ಬರಾಗಿದ್ದರು. ಗೊರೂರು ಗ್ರಾಮದಲ್ಲಿ 1904ರ ಜುಲೈ 4ರಂದು ಜನಿಸಿದರು. ತಂದೆ ಶ್ರೀನಿವಾಸ ಅಯ್ಯಂಗಾರ್ ತಾಯಿ ಲಕ್ಷ್ಮಮ್ಮ. ಗೊರೂರಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣವನ್ನು ಮುಗಿಸಿದ ಮೇಲೆ ಹಾಸನದಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆಯುತ್ತಿದ್ದಾಗಲೇ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದರು. ಅನಂತರ ಗುಜರಾತ್ ಗಾಂಧಿ ಆಶ್ರಮದಲ್ಲಿದ್ದ ವಿದ್ಯಾ ಪೀಠದಲ್ಲಿ ಓದು ಮುಂದುವರೆಸಿದರು. ಅನಂತರ ಪತ್ರಿಕಾರಂಗ ಪ್ರವೇಶಿಸಿದರು. ಮದರಾಸಿನ `ಲೋಕಮಿತ್ರ’ ಆಂಧ್ರ ಪತ್ರಿಕೆ `ಭಾರತಿ’ ಪತ್ರಿಕೆಗಳಲ್ಲಿ ಉಪಸಂಪಾದಕರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿದರು. 1952ರಲ್ಲಿ ವಿಧಾನಸಭೆಗೆ ನಾಮಕರಣಗೊಂಡಿದ್ದ ಅವರು ಅದಕ್ಕೂ ...

READ MORE

Related Books