ವೇದ ಸಂಸ್ಕೃತಿಯ ಪರಿಚಯ (1 ರಿಂದ 3 ಸಂಪುಟಗಳು)

Author : ಕೆ.ಎಸ್‍. ನಾರಾಯಣಾಚಾರ್ಯ

₹ 1568.00




Year of Publication: 2018
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ಬೀದಿ, ಹುಬ್ಬಳ್ಳಿ- 580020
Phone: 0836-2367676

Synopsys

ಸಾಹಿತಿ ಕೆ.ಎಸ್. ನಾರಾಯಣಾಚಾರ್ಯ ಅವರು ವೇದ ಸಂಸ್ಕೃತಿಯ ಕುರಿತಂತೆ ಬರೆದ 1 ರಿಂದ 3 ಸಂಪುಟಗಳನ್ನು ಒಳಗೊಂಡ ಕೃತಿ ಇದು. ವೇದಗಳು ನಮ್ಮ ಸನಾತನ ಧರ್ಮದ ತಳಹದಿ. ಅವು ಮನುಷ್ಯನ ನಡಾವಳಿಕೆ, ಚಿಂತನೆಗಳನ್ನು ನಿರ್ದೇಶಿಸುತ್ತವೆ. ಅವುಗಳ ಉದ್ದೇಶ ಮನುಕುಲದ ಉದ್ಧಾರವೇ ಆಗಿದೆ. ಆದರೆ, ಕಾಲಕ್ಕೆ ಅನುಗುಣವಾಗಿ ಅವುಗಳ ಅರ್ಥಗಳನ್ನು ಗ್ರಹಿಸುವುದು ಅಗತ್ಯ. ತಪ್ಪಿದರೆ, ಅವುಗಳ ಮಹತ್ವವು ಗೌಣವಾಗುವ ಸಾಧ್ಯತೆಯೇ ಹೆಚ್ಚು. ಏಕೆಂದರೆ, ಅವು ತೀರಾ ಸನಾತನ ಹಾಗೂ ಪುರಾತನ ಚಿಂತನೆಗಳಾಗಿವೆ. ಆಯಾ ಕಾಲದಲ್ಲೇ ಅವುಗಳನ್ನಿಟ್ಟು, ವಿಶ್ಲೇಷಿಸುವುದು ಅನಿವಾರ್ಯ. ಈ ಹಿನ್ನೆಲೆಯಲ್ಲಿ, ವೇದ ಸಂಸ್ಕೃತಿಯ ಪರಿಪೂರ್ಣ ಚಿತ್ರಣವನ್ನು ಲೇಖಕರು ಇಲ್ಲಿ ಸಂಗ್ರಹಿಸಿದ್ದಾರೆ.

About the Author

ಕೆ.ಎಸ್‍. ನಾರಾಯಣಾಚಾರ್ಯ
(31 October 1933 - 26 November 2021)

ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ  (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್‌ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್‌ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...

READ MORE

Related Books