ವೆಂಕಟರಾಮ ದೈತೋಟ

Author : ನಾ. ಕಾರಂತ ಪೆರಾಜೆ

Pages 56

₹ 45.00




Year of Publication: 2017
Published by: ಕನ್ನಡ ಸಂಘ, ಕಾಂತಾವರ
Address: ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡ ಭವನ, ಕಾಂತಾವರ, ಅಂಚೆ-ಕಾಂತಾವರ-574129, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ
Phone: 8548933733

Synopsys

ಕಾಂತಾವರ ಕನ್ನಡ ಸಂಘವು 'ನಾಡಿಗೆ ನಮಸ್ಕಾರ ಸಾಹಿತ್ಯ ಸಂಸ್ಕೃತಿ ಚಿಂತನ ಗ್ರಂಥಮಾಲೆಯಲ್ಲಿ ಪ್ರಕಟಿಸಿರುವ 187ನೇ ಕೃತಿ ಮೂಲಿಕಾ ತಜ್ಞ ವೆಂಕಟರಾಮ ದೈತೋಟ. ಆಧುನಿಕ ವೈದ್ಯ ಪದ್ಧತಿಯಿಂದ ರೋಗ ಗುಣವಾಗದೆ, ಮೂಲಿಕಾ ಚಿಕಿತ್ಸೆಗೆ ಶರಣಾಗಿ ಸಂಪೂರ್ಣ ಗುಣ ಹೊಂದಿದವರು ಹಲವರು. 'ಇಂತಹ ಕಾಯಿಲೆಗಳು ಎಷ್ಟೋ ಇವೆ. ಕಳೆದ ಹಲವು ವರುಷಗಳಿಂದ ಇಂತಹ ಪ್ರಕರಣಗಳು ಸಾಕಷ್ಟಿವೆ. ಇದು ಆಧುನಿಕ ವೈದ್ಯ ಪದ್ಧತಿಯ ದೋಷವಲ್ಲ. ವೈದ್ಯರ ತಪ್ಪು ಚಿಕಿತ್ಸೆಯಿಂದ ಆದಂತಹ ತೊಂದರೆ' – ಎನ್ನುತ್ತಾರೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯ ಮೂಲಿಕಾ ವೈದ್ಯ ಪಿ.ಎಸ್.ವೆಂಕಟರಾಮ ದೈತೋಟ. ದೈತೋಟರಿಗೆ ಆಯುರ್ವೆದ ಜ್ಞಾನ ಪಾರಂಪರಿಕ, ಅಜ್ಞ ವೈದ್ಯ ಶಂಕರನಾರಾಯಣ ಭಟ್, ತಂದೆ ಪಂಡಿತ ಶಂಕರನಾರಾಯಣ ಭಟ್ ಇವರ ಬಳುವಳಿ. ಅವರು 'ಪಾಣಾಜೆ ಪಂಡಿತ'ರೆಂದೇ ಖ್ಯಾತರಾಗಿದ್ದರು. ವೆಂಕಟರಾಮ ದೈತೋಟರ ಜೀವನ-ಸಾಧನೆಯನ್ನು ಈ ಕೃತಿಯು ಪರಿಚಯಿಸುತ್ತದೆ.

 

About the Author

ನಾ. ಕಾರಂತ ಪೆರಾಜೆ
(19 August 1964)

ಪತ್ರಕರ್ತರಾಗಿರುವ ನಾ. ಕಾರಂತ ಪೆರಾಜೆ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸದ್ಯ ಸುಳ್ಯದ ನಿವಾಸಿ ಅಗಿರುವ ಅವರು ಯಕ್ಷಗಾನದಲ್ಲಿ ವಿಶೇಷ ಅಸಕ್ತಿ ಉಳ್ಳವರು.  ನಾ. (ನಾರಾಯಣ) ಕಾರಂತ ಪೆರಾಜೆಯವರು ಪತ್ರಕರ್ತ, ಸಾಹಿತಿ, ಯಕ್ಷಗಾನ ಕಲಾವಿದ, ಕೃಷಿಕ ಮತ್ತು ಚಿಂತಕ. ಅವರು ಕೃಷಿ ಮಾಸಿಕ ’ಅಡಿಕೆ ಪತ್ರಿಕೆ’ಯಲ್ಲಿ ಸಹಾಯಕ ಸಂಪಾದಕರಾಗಿದ್ದಾರೆ. ಕೃಷಿ, ಗ್ರಾಮೀಣ ರಂಗದ ಬಗ್ಗೆ, ಯಕ್ಷಗಾನದ ಬಗ್ಗೆ ಮಾಹಿತಿಪೂರ್ಣವಾಗಿ ಆಕರ್ಷಕವಾಗಿ ಬರೆಯುವ ಕಾರಂತರು 'ನೆಲದ ನಾಡಿ' (ಉದಯವಾಣಿ), ಹೊಸದಿಗಂತದಲ್ಲಿ 'ಮಾಂಬಳ' (ಹೊಸದಿಗಂತ) “ದಧಿಗಿಣತೋ' (ಪ್ರಜಾವಾಣಿ) ಅಂಕಣಗಳನ್ನು ಬರೆಯುತ್ತಿದ್ದಾರೆ. 'ತಳಿತಪಸ್ವಿ', 'ಮಾಂಬಳ', 'ಮನಮಿಣುಕು', 'ಮಣ್ಣಮಿಡಿತ', 'ಮಣ್ಣಮಾಸು', ...

READ MORE

Related Books