ವಿಚಾರಣೆ

Author : ಲಕ್ಷ್ಮಣ ಕೊಡಸೆ

Pages 120

₹ 40.00




Year of Publication: 2007
Published by: ಕನ್ನಡ ಸಾಹಿತ್ಯ ಪರಿಷತ್ತು
Address: ಚಾಮರಾಜಪೇಟೆ, ಬೆಂಗಳೂರು- 560018

Synopsys

ಪತ್ರಕರ್ತ, ಲೇಖಕ ಲಕ್ಷ್ಮಣ ಕೊಡಸೆ ಅವರ ಹನ್ನೆರಡು ಕಥೆಗಳ ಗುಚ್ಛ ‘ವಿಚಾರಣೆ’. ಶಿವಮೊಗ್ಗದಲ್ಲಿ ಕೆ.ಎಸ್.ನಿಸಾರ್ ಅಹಮದ್ ಅಧ್ಯಕ್ಷತೆಯಲ್ಲಿ ನಡೆದ 73ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹೊರತಂದ ಪ್ರಕಟಣೆಗಳಲ್ಲಿ ಇದೂ ಒಂದು. ಗ್ರಾಮೀಣ ಬದುಕಿನ ಹಲವು ಸಂಕೀರ್ಣತೆಗಳನ್ನು ಇಲ್ಲಿನ ಪಾತ್ರಗಳ ಮೂಲಕ ಚಿತ್ರಿಸಿದ್ದಾರೆ ಕತೆಗಾರರು.

About the Author

ಲಕ್ಷ್ಮಣ ಕೊಡಸೆ
(12 April 1953)

ಕತೆಗಾರ, ಪತ್ರಕರ್ತ ಲಕ್ಷ್ಮಣ ಕೊಡಸೆ ಅವರು 1953 ಏಪ್ರಿಲ್ 12ರಂದು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೊಡಸೆ ಗ್ರಾಮದಲ್ಲಿ ಜನಿಸಿದರು. ತಾಯಿ ಭರ್ಮಮ್ಮ, ತಂದೆ ಕರಿಯನಾಯ್ಕ. ಹುಟ್ಟೂರು ಹಾಗೂ ಹೊಸನಗರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಪ್ರಜಾವಾಣಿಯಲ್ಲಿ ಉಪಸಂಪಾದಕರಾಗಿ, ಮುಖ್ಯವರದಿಗಾರರಾಗಿ ಸುದ್ದಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ.  ‘ಅಪ್ಪನ ಪರಪಂಚ, ಕೊಡಚಾದ್ರಿ, ಸಹಪಥಿಕ, ಅವ್ವ, ಬಿ. ವೆಂಕಟಾಚಾರ್ಯ, ಕುವೆಂಪು ಮತ್ತು, ಕನ್ನಡ ವಿಮರ್ಶಾ ವಿವೇಕ, ಹಾಯಿದೋಣಿ’ ಅವರ ಪ್ರಮುಖ ಕೃತಿಗಳು.    ...

READ MORE

Related Books