ವಿಚಾರ ಕ್ರಾಂತಿಗೆ ಕುವೆಂಪು ಕರೆ

Author : ದೇಜಗೌ (ದೇ. ಜವರೇಗೌಡ)

Pages 42

₹ 30.00




Year of Publication: 2015
Published by: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು

Synopsys

ಕವಿ ಕುವೆಂಪು ಅವರ ವೈಚಾರಿಕ ನಿಲುವು ಗೊತ್ತಿರುವ ಸಂಗತಿ. ನಿರಂಕುಶಮತಿಗಳಾಗಿ ಎಂದು ಯುವಕರಿಗೆ ಸೂಚಿಸಿದ್ದ ಕುವೆಂಪು ಅವರು ’ವಿಚಾರ ಕ್ರಾಂತಿಗೆ ಆಹ್ವಾನ’ ನೀಡಿದ್ದರು. ಕುವೆಂಪು ಅವರ ವೈಚಾರಿಕತೆ ಕುರಿತು ಅವರ ಶಿಷ್ಟ ಜವರೇಗೌಡರು ರಚಿಸಿದ ಕೃತಿಯಿದು. ವೈಜ್ಞಾನಿಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಈ ಪುಸ್ತಕ ಮಹತ್ವದ್ದಾಗಿದೆ.

About the Author

ದೇಜಗೌ (ದೇ. ಜವರೇಗೌಡ)
(06 July 1918 - 30 April 2016)

ದೇಜಗೌ ಎಂದು ಚಿರಪರಿಚಿತರಾಗಿದ್ದ ದೇವೇಗೌಡ ಜವರೇಗೌಡ ಕೃಷಿಕ ಕುಟುಂಬದಿಂದ ಬಂದವರು. ಚನ್ನಪಟ್ಟಣ ತಾಲ್ಲೂಕಿನ ಮೂಡಿಗೆರೆಯಲ್ಲಿ 1918ರ ಜುಲೈ 6ರಂದು ಜನಿಸಿದರು. ತಂದೆ ದೇವೇಗೌಡ- ತಾಯಿ ಚೆನ್ನಮ್ಮ. ಚಕ್ಕೆರೆ, ಚನ್ನಪಟ್ಟಣಗಳಲ್ಲಿ ಶಾಲಾ ಶಿಕ್ಷಣ ಮುಗಿಸಿ ಬೆಂಗಳೂರಿನಲ್ಲಿ ಕಾಲೇಜು ವಿದ್ಯಾಭ್ಯಾಸ ಮಾಡಿ ಬಿ.ಎ ಪದವಿ ಗಳಿಸಿ ಕೆಲವು ಕಾಲ ಗುಮಾಸ್ತರಾಗಿ ಕೆಲಸ ಮಾಡಿ ಅನಂತರ ಮೈಸೂರಿಗೆ ಹೋಗಿ ಎಂ.ಎ. ಪದವಿ ಗಳಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕ (1944) ಕೆಲಸಕ್ಕೆ ಸೇರಿದ ಅವರು ಅನಂತರ ಉಪಪ್ರಾಧ್ಯಾಪಕ, ಪರೀಕ್ಷಾಧಿಕಾರಿ, ಪ್ರಾಂಶುಪಾಲರು, ಇಲಾಖಾಮುಖ್ಯರು, ನಿರ್ದೇಶಕರು, ಕೊನೆಗೆ ಮೈಸೂರು ವಿಶ್ವವಿದ್ಯಾಲಯದ ಗೌರವಾನ್ವಿತ ಉಪಕುಲಪತಿಯಾಗಿ ನಿವೃತ್ತರಾದರು. ಕುವೆಂಪು ವಿದ್ಯಾವರ್ಧಕ ...

READ MORE

Related Books