ವಿದ್ಯಾಸಾಗರರ ಮುಗಿಯದ ನಡಿಗೆ

Author : ಬಿ.ಆರ್‌. ಮಂಜುನಾಥ್‌

Pages 152

₹ 150.00




Year of Publication: 2021
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ ಬಳಿ, ಕುಮಾರಪಾರ್ಕ್ ಪೂರ್ವ, ಬೆಂಗಳೂರು

Synopsys

ಚಿಂತಕ-ಸಮಾಜ ಸುಧಾರಕ ಈಶ್ವರಚಂದ್ರ ವಿದ್ಯಾಸಾಗರ ಅವರ ಜೀವನ ವೃತ್ತಾಂತ ಕುರಿತು ಲೇಖಕ ಬಿ.ಆರ್. ಮಂಜುನಾಥ್ ಅವರ ಬರೆದ ಕೃತಿ-ವಿದ್ಯಾಸಾಗರರ ಮುಗಿಯದ ನಡಿಗೆ. ಶಿಕ್ಷಣ ತಜ್ಞ, ತತ್ವಜ್ಞಾನಿ, ವ್ಯಾಪಾರಿ, ಬರಹಗಾರ, ಸಮಾಜ ಸುಧಾರಕ ಮತ್ತು ದಾನಿಯೂ ಆಗಿದ್ದರು. ಬಂಗಾಳದಲ್ಲಿ ಇವರದ್ದು ಬಹುದೊಡ್ಡ ಹೆಸರು. ಬಂಗಾಳದ ಮಿಡ್ನಾಪುರದಲ್ಲಿ ಜನಿಸಿದರು. ಬಾಲ್ಯವಿವಾಹ, ವರದಕ್ಷಿಣೆ ಪದ್ಧತಿ, ಹೆಣ್ಣನ್ನು ತುಚ್ಛವಾಗಿ ಕಾಣುವ ಸಮಾಜದ ವಿರುದ್ಧ ಅವರು ಹೋರಾಡಿದರು. ವಿಧವಾ ವಿವಾಹವನ್ನು ಸಮರ್ಥಿಸಿಕೊಂಡರು. ಬಂಗಾಳಿ ಭಾಷೆಯಲ್ಲಿ ಸಣ್ಣ ಕಥೆಗಳನ್ನು ಬರೆದು ಜಾಗೃತಿ ಮೂಡಿಸಲು ಯತ್ನಿಸಿದರು. ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಕಥೆಗಳು ಹೆಚ್ಚಿನವು. 1891ರ ಜುಲೈ 29ರಂದು ಈಶ್ವರಚಂದ್ರ ವಿದ್ಯಾಸಾಗರರು ನಿಧನರಾದರು.

About the Author

ಬಿ.ಆರ್‌. ಮಂಜುನಾಥ್‌
(21 December 1940)

ಲೇಖಕ ಬಿ. ಆರ್‌. ಮಂಜುನಾಥ್ ಅವರು ತುರ್ತುಪರಿಸ್ಥಿತಿಯ ನಂತರದ ದಿನಗಳಲ್ಲಿ ಎಡಪಂಥೀಯ ವಿದ್ಯಾರ್ಥಿ ಚಳುವಳಿಗೆ, ಸಾಂಸ್ಕೃತಿಕ ಆಂದೋಲನಕ್ಕೆ ಧುಮುಕಿದವರು. ಜಾನ್ ರೀಡ್ ಅವರ 'ಟೆನ್ ಡೇಸ್ ದಟ್ ಶುಕ್ ದ ವರ್ಲ್‌, ಸಮಾಜವಾದಿ ವೈದ್ಯಕೀಯದ ಕುರಿತಾದ 'ರೆಡ್ ಮೆಡಿಸಿನ್', ಇ.ಎಚ್.ಕಾರ್‌ ಅವರ 'ವಾಟ್ ಈಸ್ ಹಿಸ್ಟರಿ' ಅವರ ಅನುವಾದಿತ ಕೃತಿಗಳಲ್ಲಿ ಕೆಲವು. ವಿವಿಧ ಸಾಂಸ್ಕೃತಿಕ, ವಿದ್ಯಾರ್ಥಿ-ಯುವಜನ ಪತ್ರಿಕೆಗಳ ಸಂಪಾದಕರಾಗಿದ್ದ ಅವರು ಭಗತ್ ಸಿಂಗ್‌ರ ಕುರಿತು ಪುಸ್ತಕಗಳನ್ನು ಬರೆದಿರುವುದಲ್ಲದೆ ಅನೇಕ ನಾಟಕ, ಬೀದಿ ನಾಟಕಗಳನ್ನು ಸಹ ರಚಿಸಿ ಆಡಿಸಿದ್ದಾರೆ. ಪ್ರಸ್ತುತ ಸಮಕಾಲೀನ ಸಾಮಾಜಿಕ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾಗಿದ್ದು ವಿವಿಧ ಜನಪರ ಆಂದೋಲನಗಳಲ್ಲಿ ...

READ MORE

Related Books