ವಿದಿಶಾ ಪ್ರಹಸನ

Author : ಸಿದ್ಧಲಿಂಗ ಪಟ್ಟಣಶೆಟ್ಟಿ

Pages 116

₹ 100.00




Year of Publication: 2020
Published by: ಅನನ್ಯ ಪ್ರಕಾಶನ, ಧಾರವಾಡ
Address: ಹೂಮನೆ, ಶ್ರೀದೇವಿನಗರ, ವಿದ್ಯಾಗಿರಿ, ಧಾರವಾಡ-580004
Phone: 94488 61604

Synopsys

‘ವಿದಿಶಾ ಪ್ರಹಸನ’ ಕವಿ ಕಾಲಿದಾಸನ ಮಾಲವಿಕಾಗ್ನಿಮಿತ್ರಮ್ ದ ರಂಗಾನುವಾದ. ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ ಅವರು ಅನುವಾದಕರು. ದೊಡ್ಡಾಟದ ಶೈಲಿ ಮತ್ತು ಗತ್ತುಗಳನ್ನು ಅಳವಡಿಸಿಕೊಂಡ ಮರು ಬರವಣಿಗೆ. ಕಾಲಿದಾಸ ತನ್ನ ಕಾಲದಲ್ಲಿ ಆಸ್ಥಾನದಲ್ಲಿ ಕಂಡ ಮದನಾಟ, ಗುಪ್ತ ಕಾಮವ್ಯವಹಾರ, ಅರಾಜಕತೆ, ಪ್ರಜೆಗಳ ಅಸಹಾಯಕ ಮೌನಗಳನ್ನು ಒಂದು ಸಹಜ ಚಿತ್ರದಂತೆ ಪ್ರಹಸನಾತ್ಮಕವಾಗಿ ಬಿಂಬಿಸುತ್ತಾನೆ. ಈ ಕೃತಿಯಲ್ಲಿ ಈ ಅಂಶವು ವಿಮರ್ಶೆಗೊಳಪಟ್ಟು, ಸಮಕಾಲೀನ ಸಂದರ್ಭದ ಸಾಮಾಜಿಕ, ರಾಜಕೀಯ ಅವಾಂತರಗಳಿಗೆ ಕನ್ನಡಿ ಹಿಡಿಯುತ್ತದೆ.

 

About the Author

ಸಿದ್ಧಲಿಂಗ ಪಟ್ಟಣಶೆಟ್ಟಿ
(03 November 1939)

ಕವಿ-ಅನುವಾದಕ-ಅಂಕಣಕಾರರಾಗಿ ಚಿರಪರಿಚಿತರಿರುವ ಸಿದ್ಧಲಿಂಗ ಪಟ್ಟಣಶೆಟ್ಟಿ ಅವರು ಜನಿಸಿದ್ದು 1939ರ ನವಂಬರ್ ೩ರಂದು. ಧಾರವಾಡ ಸಮೀಪದ ಯಾದವಾಡ ಎಂಬ ಹಳ್ಳಿಯಲ್ಲಿ ಜನಿಸಿದ ಅವರು ಒಂದೂವರೆ ವರ್ಷದವರಿರುವಾಗಲೇ ತಂದೆಯನ್ನು ಕಳೆದುಕೊಂಡರು. ಕಡು ಬಡತನದಿಂದಾಗಿ ತಾಯಿಯ ತವರು ಮನೆ ಮನಗುಂಡಿ ಸೇರಿದರು. ಚಹಾ ಅಂಗಡಿಯಲ್ಲಿ ಕೆಲಸ ಮಾಡುತ್ತ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದರು. ಶಿಕ್ಷಣ ಮುಂದುವರಿಸುವ ದೃಢ ಸಂಕಲ್ಪದಿಂದ ತಾಯಿಯೊಂದಿಗೆ ಮತ್ತೆ ಧಾರವಾಡಕ್ಕೆ ಬಂದ ಅವರು  ಹಿಂದೀ ಎಂ.ಎ., ಪಿಎಚ್.ಡಿ. ಪದವಿಗಳನ್ನು ಪಡೆದರು. ಒಂದು ವರ್ಷ ಹೈಸ್ಕೂಲ್ ಶಿಕ್ಷಕ, ಒಂದು ವರ್ಷ ಶಿರಸಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದು, 1966 ರಿಂದ 1999ರ ವರೆಗೆ ಕರ್ನಾಟಕ ...

READ MORE

Related Books