ವಿಜಯನಗರ ಸಾಮ್ರಾಜ್ಯ ಸಂಪುಟ-2

Author : ಅ.ನ.ಕೃ (ಅ.ನ. ಕೃಷ್ಣರಾಯ)

Pages 655

₹ 400.00




Year of Publication: 2014
Published by: ಹೇಮಂತ ಸಾಹಿತ್ಯ,
Address: ನಂ.972, ಸಿ, 4ನೇ ಇ ಬ್ಲಾಕ್, 10ನೇ ಮುಖ್ಯರಸ್ತೆ, ರಾಜಾಜಿನಗರ, ಬೆಂಗಳೂರು-560060
Phone: 08023507170

Synopsys

ಖ್ಯಾತ ಸಾಹಿತಿ, ಕಾದಂಬರಿಕಾರ ಅ.ನ.ಕೃಷ್ಣರಾಯ (ಅ.ನ.ಕೃ) ಅವರು ರಚಿಸಿದ ಐತಿಹಾಸಿಕ ಕಾದಂಬರಿ-ವಿಜಯನಗರ ಸಾಮ್ರಾಜ್ಯ, ಸಂಪುಟ-2. ವಿಜಯನಗರ ಸಾಮ್ರಾಜ್ಯ ಕುರಿತು ಈಗಾಗಲೇ ಮೊದಲ ಸಂಪುಟವಾಗಿ ಪ್ರಕಟಿಸಿರುವ ಲೇಖಕರು, ಮುಂದುವರಿದ ಭಾಗವಾಗಿ ಸಾಮ್ರಾಜ್ಯದ ಏಳು-ಬೀಳುಗಳನ್ನು ವಸ್ತುವಾಗಿಸಿಕೊಂಡಿದ್ದಾರೆ. ಸಾಹಿತ್ಯ ಕೃತಿಯಾಗಿಯೂ ಈ ಕಾದಂಬರಿ ಗಮನ ಸೆಳೆಯುತ್ತದೆ.

About the Author

ಅ.ನ.ಕೃ (ಅ.ನ. ಕೃಷ್ಣರಾಯ)
(09 May 1908 - 04 July 1971)

‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಹೆಸರಾಂತ ಕಾದಂಬರಿಕಾರರು. ‘ಕಾದಂಬರಿ ಸಾರ್ವಭೌಮ’ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರು. ಪ್ರಗತಿಶೀಲ ಸಾಹಿತ್ಯದ ಪ್ರಮುಖ ಲೇಖಕರು. ತಂದೆ ನರಸಿಂಗರಾವ್, ತಾಯಿ ಅನ್ನಪೂರ್ಣಮ್ಮ. 1908ರ ಮೇ 9ರಂದು ಜನಿಸಿದ ಅವರುಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಕೋಲಾರದಲ್ಲಿ ಮುಗಿಸಿದರು. ಬೆಂಗಳೂರಿನಲ್ಲಿ ಪ್ರೌಢಶಾಲಾ ಶಿಕ್ಷಣವನ್ನು ದೇಶೀಯ ವಿದ್ಯಾಶಾಲೆಯಲ್ಲಿ ಪಡೆದರು. ಮೆಟ್ರಿಕ್ ಓದುತ್ತಿದ್ದಾಗ ಶಾಂತಿನಿಕೇತನಕ್ಕೆ ಹೋಗಿ ಬಂದರು. ಬರಹ ಮಾಡಿಯೇ ಬದುಕಿದವರು ಅನಕೃ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಕಥಾಂಜಲಿ, ಬಾಂಬೆ ಕ್ರಾನಿಕಲ್, ವಿಶ್ವವಾಣಿ ಪತ್ರಿಕೆಗಳನ್ನು ...

READ MORE

Related Books