ವಿಕೃತಿಯಿಂದ ಸಂಸ್ಕೃತಿಯೆಡೆಗೆ

Author : ಹೂ.ವೆ. ಶೇಷಾದ್ರಿ

Pages 125

₹ 30.00




Year of Publication: 1995
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಬೆಂಗಳೂರು-19.

Synopsys

ʼವಿಕೃತಿಯಿಂದ ಸಂಸ್ಕೃತಿಯೆಡೆಗೆʼ ಲೇಖಕ ಹೂ.ವೆ. ಶೇಷಾದ್ರಿ ಅವರ  ವೈಚಾರಿಕ ಬರಹಗಳ  ಸಂಕಲನ. ಈ ಕೃತಿಯಲ್ಲಿ 1978-81ರ ಮೂರು ವರ್ಷದ ಅವಧಿಯಲ್ಲಿ ’ಉತ್ಥಾನ’ಮಾಸ ಪತ್ರಿಕೆಯಲ್ಲಿ ಪ್ರಕಟಗೊಂಡ ಸಾಮಾಜಿಕ – ಸಾಂಸ್ಕೃತಿಕ ಪ್ರಬಂಧಗಳು. ವಿಕಾಸದ ಸರ್ವೋಚ್ಚ ಹಂತ ಮುಟ್ಟಲು ಓದುಗರಿಗೆ ದಾರಿ ತೋರುವ ಮಾರ್ಗದರ್ಶಿ ಪುಟಗಳನ್ನು ಈ ಗ್ರಂಥದಲ್ಲಿ ಕಾಣಬಹುದು. ಸಮಾಜವು ಹೇಗಿರಬೇಕು ಎಂಬುದನ್ನು ಇಲ್ಲಿಯ ಪ್ರಬಂಧಗಳಲ್ಲಿ ಕಾಣಬಹುದು. ಸಾಮಾಜಿಕ ಮತ್ತು ಸಾಂಸ್ಕೃತಿಕ ಲೋಕ ಹೇಗಿರಬೇಕು ಎಂಬುದನ್ನು ಕೇಂದ್ರವಾಗಿರಿಸಿಕೊಂಡು ಈ ಬರಹಗಳು ರಚಿತವಾಗಿವೆ.

About the Author

ಹೂ.ವೆ. ಶೇಷಾದ್ರಿ
(26 May 1926 - 14 August 2005)

ಖ್ಯಾತ ಲೇಖಕ ಶೇಷಾದ್ರಿಯವರು (26-05-1926) ಹುಟ್ಟಿದ್ದು ಹೊಂಗಸಂದ್ರದಲ್ಲಿ. ತಂದೆ ವೆಂಕಟರಾಮಯ್ಯ, ತಾಯಿ ಪಾರ್ವತಮ್ಮ. ಬೆಂಗಳೂರಿನ (19476) ಸೆಂಟ್ರಲ್ ಕಾಲೇಜಿನಿಂದ ರಸಾಯನ ಶಾಸ್ತ್ರದಲ್ಲಿ ಸ್ವರ್ಣಪದಕದೊಂದಿಗೆ ಎಂ.ಎಸ್ಸಿ. ಪದವೀಧರರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತರು. 1980ರಲ್ಲಿ ಕ್ಷೇತ್ರೀಯ (ಕರ್ನಾಟಕ, ಆಂಧ್ರ, ಕೇರಳ, ತಮಿಳುನಾಡು) ಪ್ರಚಾರ ಕಾರ‍್ಯ ನಿರ್ವಹಣೆ, ಸಂಘದ ಪ್ರಧಾನ ಕಾರ‍್ಯದರ್ಶಿಯಾಗಿಯೂ ಆಗಿದ್ದರು.ಸಂಘದ ವೈಚಾರಿಕ ಹಾಗೂ ಸೈದ್ಧಾಂತಿಕ ಬರಹಗಳನ್ನು ಬರೆದರು.  ವಿಕ್ರಮ, ಉತ್ಥಾನ-ಕನ್ನಡ ಪತ್ರಿಕೆಗಳಲ್ಲಿ, ಇಂಗ್ಲಿಷ್‌ನ ಆರ್ಗನೈಸರ್, ಹಿಂದಿಯ ಪಾಂಚಜನ್ಯ ಹಾಗೂ ದೇಶದ ಇತರ ಭಾಷೆಗಳ ನಿಯತ ಕಾಲಿಕೆಗಳಲ್ಲಿ ಲೇಖನ, ವಿಮರ್ಶಾತ್ಮಕ ವಿಶ್ಲೇಷಣೆಗಳನ್ನು ಬರೆದರು. ಕೃತಿಗಳು-ಯುಗಾವತಾರ, ಅಮ್ಮಾ ಬಾಗಿಲು ತೆಗೆ, ಚಿಂತನಗಂಗಾ, ದೇಶ ...

READ MORE

Related Books