ಪ್ರಮುಖ ಕತೆಗಾರ ವಸುಧೇಂದ್ರ ಅವರು ಬರೆದಿರುವ ಅಮೃತ ಸೊಪ್ಪು, ವಾಹಿನಿ, ಡೆವಿಲ್ ಡಾಗ್, ವಿಷಮ ಭಿನ್ನರಾಶಿ, ನಿಯಮ ಬಾಹಿರ, ಸೈಕಲ್ ಸವಾರಿ, ಚತುರ್ಮುಖ, ಆಡಬಾರದ ಮಾತುಗಳು ಕಾಡುವಾಗ- ಹೀಗೆ ಎಂಟು ಕಥೆಗಳನ್ನು ಈ ಕೃತಿಯು ಒಳಗೊಂಡಿದೆ. ತಂದೆ ತಾಯಿ, ಸಂಸ್ಕಾರವನ್ನೂ ಮರೆತು ತಂತ್ರಜ್ಞಾನ ಜಗತ್ತಿನಲ್ಲಿ ಹುದ್ದೆಯಲ್ಲಿ ಮೇಲೇರಲು ಹಪಾಹಪಿಸುವ ಯುವ ಜನಾಂಗವನ್ನು ಈ ಕೃತಿಯಲ್ಲಿ ಹಿಡಿದಿಟ್ಟಿದ್ದಾರೆ.
ವಸುಧೇಂದ್ರ ಅವರು ಕನ್ನಡದ ಪ್ರಸಿದ್ಧ ಬರಹಗಾರರು ಹಾಗೂ ಪುಸ್ತಕ ಪ್ರಕಾಶಕರು. ಮುಖ್ಯವಾಗಿ ಕತೆ, ಕಾದಂಬರಿ, ಲಲಿತ ಪ್ರಬಂಧಗಳು ಇವರ ಬರವಣಿಗೆಯ ಪ್ರಕಾರಗಳು.ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 1969ರಲ್ಲಿ ಜನಿಸಿದ ವಸುಧೇಂದ್ರ ಅಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಆನಂತರ ಸುರತ್ಕಲ್ ನಿಂದ ಇಂಜಿನಿಯರಿಂಗ್ ಪದವಿ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಯ್ ನಿಂದ ಎಂ.ಇ. ಪದವಿ ಪಡೆದಿದ್ದಾರೆ. ಸುಮಾರು 20 ವರ್ಷಗಳ ಕಾಲ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ವಾಸವಿದ್ದು, ಸದ್ಯಕ್ಕೆ ಖಾಸಗಿಯಾಗಿ ಹಲವಾರು ಕೆಲಸ ಮತ್ತು ಬರವಣಿಗೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮನೀಷೆ, ಯುಗಾದಿ, ಚೇಳು, ...
READ MORE