ವಿವೇಕಾನಂದ ಸಂದೇಶ- ಕೌಮುದಿ

Author : ಎಸ್‌.ಆರ್‌. ರಾಮಸ್ವಾಮಿ

Pages 230

₹ 100.00




Year of Publication: 2001
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಬೆಂಗಳೂರು-19

Synopsys

ವಿವೇಕಾನಂದ ಸಂದೇಶ- ಕೌಮುದಿ ಈ ಕೃತಿಯು ವಿವೇಕಾನಂದರ ಜೀವನ ಚರಿತ್ರೆಯನ್ನು ಕಟ್ಟಿಕೊಡುತ್ತದೆ. ಲೇಖಕ ಎಸ್.‌ ಆರ್.‌ ರಾಮಸ್ವಾಮಿ ಅವರು ರಚಿಸಿದ್ದಾರೆ. ಆಧುನಿಕ ಭಾರತದ ನಿರ್ಮಾಪಕರ ಸಾಲಿನಲ್ಲಿ ತಮ್ಮ ಹೆಸರನ್ನು ಶಾಶ್ವತಗೊಳಿಸಿಕೊಂಡ ಸ್ವಾಮಿ ವಿವೇಕಾನಂದರು, ಶ್ರೀರಾಮಕೃಷ್ಣ ಪರಮಹಂಸರಿಂದಲೇ ತಮ್ಮ ಉತ್ತರಾಧಿಕಾರಿ ಎಂದು ನಿರ್ದಿಷ್ಟರಾದರು. ವಿವೇಕಾನಂದರು, ಭಾರತದ ಆಧ್ಯಾತ್ಮಿಕ ಹಿರಿಮೆಗೆ ಇಡೀ ಜಗತ್ತಿನ ಗೌರವನ್ನು ಗಳಿಸಿಕೊಡುವುದರ ಜೊತೆಗೆ ಸ್ವದೇಶೀಯರಲ್ಲಿಯೇ ಹೆಚ್ಚಿನ ಅಭಿಮಾನಕ್ಕೆ ಪಾತ್ರರಾದರು. ಯಾವ ಕಾರಣಗಳಿಂದಾಗಿ ಸ್ವಾಮಿ ವಿವೇಕಾನಂದರು ಯುಗಪುರುಷರೆನಿಸಿದ್ದಾರೆ. ಯಾವ ಕಾರಣಗಳಿಂದ ಅವರು ಋಷಿತುಲ್ಯರಾಗಿದ್ದಾರೆ, ಅವರ ಚಿಂತನೆ ಅನನ್ಯವೆನಿಸಲು ಕಾರಣಗಳೇನು, ಅವುಗಳ ಸಾಂದರ್ಭಿಕತೆಗಳೇನು...ಮುಂತಾದ ವಿಷಯಗಳ ಕುರಿತು ಈ ಪುಸ್ತಕದಲ್ಲಿ ಚರ್ಚಿಸಲಾಗಿದೆ.

 

About the Author

ಎಸ್‌.ಆರ್‌. ರಾಮಸ್ವಾಮಿ

ನಾಡೋಜ ಎಸ್‌.ಆರ್‌.ರಾಮಸ್ವಾಮಿ ಅವರು ಪತ್ರಕರ್ತರಾಗಿ, ಲೇಖಕರಾಗಿ, ಚಿಂತಕರಾಗಿ, ವಿಮರ್ಶಕರಾಗಿ, ಸಾಮಾಜಿಕ ಕಾರ್ಯಕರ್ತರಾಗಿ ನಾಡಿನಲ್ಲಿ ಸುಪರಿಚಿತರು. ಮೂಲತಃ ಬೆಂಗಳೂರಿನವರೇ ಆದ ರಾಮಸ್ವಾಮಿ ಅವರು ಕನ್ನಡ, ತೆಲುಗು, ಸಂಸ್ಕೃತ, ಹಿಂದಿ, ಇಂಗ್ಲಿಷ್, ಜರ್ಮನ್, ಫ್ರೆಂಚ್ ಭಾಷೆಗಳಲ್ಲಿ ಪ್ರಾವೀಣ್ಯತೆ ಹೊಂದಿದವರು. 1950ರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದ ಇವರು, 1972 ರಿಂದ 79ರ ವರೆಗೆ ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕರಾಗಿ ಸೇವೆ ಸಲ್ಲಿಸಿದರು. 1980ರಲ್ಲಿ ರಾಷ್ಟೋತ್ಥಾನ ಸಾಹಿತ್ಯ ಮತ್ತು ಉತ್ಥಾನ ಮಾಸಪತ್ರಿಕೆಯ ಗೌರವ ಪ್ರಧಾನ ಸಂಪಾದಕರಾದ ಇವರು ಇಂದಿಗೂ ಆ ಹುದ್ದೆಯಲ್ಲಿ ಸೇವಾನಿರತರಾಗಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು 55 ಕ್ಕೂ ...

READ MORE

Related Books