ವ್ಯಕ್ತಿ ವಿಶಿಷ್ಟ ಸಿದ್ಧಾಂತ ಮತ್ತು ಯಮಳ ಪ್ರಶ್ನೆ

Author : ಕೆ.ಪಿ. ಪೂರ್ಣಚಂದ್ರ ತೇಜಸ್ವಿ

₹ 60.00




Year of Publication: 2011
Published by: ಪುಸ್ತಕ ಪ್ರಕಾಶನ
Address: 91, 9ನೇ ಮುಖ್ಯರಸ್ತೆ, ಸರಸ್ವತಿಪುರಂ, ಮೈಸೂರು-570 009
Phone: 0821-2545774, 9448203730

Synopsys

ಲಹರಿ ಬುದ್ದಿ ಪ್ರಚಾರ ಯೋಜನೆಯಡಿ ಪ್ರಕಟವಾದ ವ್ಯಕ್ತಿ ವಿಶಿಷ್ಟ ಸಿದ್ಧಾಂತ (1964) ಒಂದು ವೈಚಾರಿಕ ಕೃತಿ. ’ಅಲಕ್ಷ ಮತ್ತು ಸಂಸ್ಕೃತಿ ಸ್ಥಿತಿ',  'ವ್ಯಕ್ತಿ ವಿಶಿಷ್ಟ ಸಿದ್ದಾಂತ',  'ವ್ಯಕ್ತಿ ವಿಶಿಷ್ಟವಾದಿ, ವಿವಾಹ,  ಪ್ರೇಮ', ಎನ್ನುವ ಮೂರು ಲೇಖನಗಳಿವೆ. ಸ್ವಲ್ಪಮಟ್ಟಿಗೆ ಅಸ್ತಿತ್ವವಾದಿ ಸಿದ್ಧಾಂತದ ತಾತ್ವಿಕತೆಗಳನ್ನು ಹೋಲುತ್ತದೆ.

1964ರಲ್ಲಿ ಪ್ರಕಟವಾದ ತೇಜಸ್ವಿಯವರ ಏಕೈಕ ನಾಟಕ ’ಯಮಳ ಪ್ರಶ್ನೆ’. ಇದೊಂದು ಅಸಂಗತ ನಾಟಕ. ನವ್ಯ ಮಾರ್ಗವು ಚಾಲ್ತಿಯಲ್ಲಿ ಪ್ರಕಟವಾಗಿತ್ತು. ಮಾರ್ಗ ಮಧ್ಯೆ ಕೆಟ್ಟುನಿಂತ ಮೋಟಾರು ಬೈಕು ಮತ್ತು ತರುಣರಿಬ್ಬರ ಸಂವಾದದ ಸುತ್ತ ಸಾಗುವ ಈ ನಾಟಕ ಮುಕ್ತಾಯವಾಗುವಷ್ಟರಲ್ಲಿ ಜೀವನದ ಸಂಕೀರ್ಣತೆಯನ್ನು, ಅಸಂಗತತೆಯನ್ನು ಬಿಂಬಿಸುವ ಹಲವು ಪ್ರಸಂಗ ಬಂದು ಹೋಗುತ್ತವೆ. ಇಲ್ಲಿನ ಮೋಟಾರು ಬೈಕು ಚಿಕಿತ್ಸೆಗೆ ಗುರಿಪಡಿಸಲಾಗದ ನಮ್ಮ ವ್ಯವಸ್ಥೆಯ ಸಂಕೇತವಾಗಿ; ಹಾಗೆಯೇ ತರುಣರ ಸಂವಾದವು ಏನನ್ನೂ ಸಾಧಿಸಲಾಗದ ವ್ಯರ್ಥ ಮಾತುಗಳಾಗಿ, ಅರ್ಥರಹಿತವಾಗಿ ಕಾಣುತ್ತವೆ.

About the Author

ಕೆ.ಪಿ. ಪೂರ್ಣಚಂದ್ರ ತೇಜಸ್ವಿ
(08 September 1938 - 05 April 2007)

ಕನ್ನಡದ ಹೆಸರಾಂತ ಲೇಖಕ ಕುವೆಂಪು ಅವರ ಪುತ್ರರಾಗಿರುವ ಪೂರ್ಣಚಂದ್ರ ತೇಜಸ್ವಿ ಅವರು 08-09-1938ರದು ಜನಿಸಿದರು. ತಮ್ಮ ಬರವಣಿಗೆಯ ಮೂಲಕವೇ ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ’ಚಿದಂಬರ ರಹಸ್ಯ’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ತೇಜಸ್ವಿ ಅವರು ಕನ್ನಡದಲ್ಲಿ ನವ್ಯ ಸಾಹಿತ್ಯ ಚಳುವಳಿಯು ಉಚ್ಛ್ರಾಯ ಸ್ಥಿತಿಯಲ್ಲಿದ್ದ  ದಿನಗಳಲ್ಲಿ ಅದಕ್ಕಿಂತ ಭಿನ್ನವಾದ ನೆಲೆಯ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದರು. ನವ್ಯ ಲೇಖಕರು ನಗರ ಕೇಂದ್ರಿತ, ವ್ಯಕ್ತಿನಿಷ್ಟ ಸಾಹಿತ್ಯ ರಚನೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಬದುಕು ಕುರಿತ ಮತ್ತು ಅದು ಹಳಹಳಿಕೆಯ ಧ್ವನಿಯಲ್ಲಿ ಇರದ ಹಾಗೆ ನೋಡಿಕೊಂಡರು. ಲೋಹಿಯಾ ಚಿಂತನೆಗಳಿಂದ ಪ್ರೇರಿತರಾಗಿದ್ದ ...

READ MORE

Related Books