ಯಶಸ್ಸೇ ಹಾದಿ

Author : ಯತಿರಾಜ್‍ ವೀರಾಂಬುಧಿ

Pages 112

₹ 90.00




Year of Publication: 2017
Published by: ಸ್ನೇಹ ಬುಕ್ ಹೌಸ್
Address: ನಂ.165, 10ನೇ ಮುಖ್ಯರಸ್ತೆ, ಶ್ರೀನಗರ, ಬೆಂಗಳೂರು- 560050
Phone: 9845031335

Synopsys

‘ಯಶಸ್ಸೇ ಹಾದಿ’ ಲೇಖಕ ಯತಿರಾಜ್ ವೀರಾಂಬುಧಿ ಅವರ ಲೇಖನ ಸಂಕಲನ. ಯಶಸ್ಸು ನಮ್ಮ ಬದುಕಿನ ಗಮ್ಯವಲ್ಲ, ಅದು ಸಾಧನೆಯ ಯಾನ ಎಂಬ ಉಕ್ತಿಯಿಂದ ಆರಂಭಿಸಿ, ಬದುಕಿನ ಹಲವು ಮಜಲುಗಳ ಬಗ್ಗೆ ಕಥಾರೂಪದ ಉದಾಹರಣೆಗಳ ಸಹಿತವಾಗಿ ಅತ್ಯಂತ ಸರಳವೂ, ಸುಂದರವೂ ಆದ ಶೈಲಿಯಲ್ಲಿ ಯತಿರಾಜ್ ವೀರಾಂಬುಧಿಯವರು ತಮ್ಮ ಲೇಖನಮಾಲೆಗಳ ಮೂಲಕ ಗಮನ ಸೆಳೆದಿದ್ದಾರೆ. ಈ ಕೃತಿ ಬದುಕಿನ ಬಗ್ಗೆ ಸಕಾರಾತ್ಮಕವಾದ ಚಿಂತನೆಯೊಂದಿಗೆ ಓದುಗರಲ್ಲಿ ಸ್ಫೂರ್ತಿ ತುಂಬುತ್ತದೆ.

About the Author

ಯತಿರಾಜ್‍ ವೀರಾಂಬುಧಿ
(11 August 1957)

ಕಥೆಗಾರ,ಲೇಖಕ, ಅನುವಾದಕ, ಕಾದಂಬರಿಗಾರರಾದ ಯತಿರಾಜ್ ವೀರಾಂಬುಧಿ 11-08-1957ರಂದು ಮೈಸೂರಿನಲ್ಲಿ ಜನಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ ಅವರು ಮೈಸೂರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ನಲ್ಲಿ ಬಿ.ಇ (ಎಲೆಕ್ಟ್ರಿಕಲ್ ಪವರ್) ಮುಗಿಸಿದರು. ಬೆಂಗಳೂರು ಮತ್ತು ಸಲ್ತನತ್ ಆಫ್ ಒಮಾನ್‌ನಲ್ಲಿ ಕಾರ್ಯ ನಿರ್ವಹಿಸಿ 2013ರಲ್ಲಿ ನಿವೃತ್ತಿ ಪಡೆದಿದ್ದಾರೆ. ಯತಿರಾಜ್ ವೀರಾಂಬುಧಿಯವರ ಪ್ರಕಟಿತ ಕೃತಿಗಳು-  ಆಪತ್ತಿಗೆ ಆಹ್ವಾನ, ಪರಿಶೋಧ, ಗಾಥೆ, ಮರದಡಿ ಮಳೆ, ಪಂಚಾನನ, ಜೀವನ್ಮುಖಿ, ಸಾಬೀತು, ಕುರುಡು ತಿರುವು, ಅವಿನಾಭಾವ, ಹಸ್ತಕ್ಷೇಪ, ಹಾಸುಹೊಕ್ಕು, ಕಪ್ಪು ನದಿ, ಉದ್ಯೋಗ ಪರ್ವ, ಕರೆದರೆ ಬಾರೆ..!, ಒಂದೊಂದಾಗಿ ಜಾರಿದರೆ, ರಣವೀಳ್ಯ, ಚಿರಸ್ಮಿತ, ಸುಖಿಯಾಗಿರು ...

READ MORE

Related Books