
’ಮಹಾ ಭಾರತ ಹೇಳಿಯೂ ಹೇಳದ್ದು’ ದೇಶದ ಮಹಾಕಾವ್ಯವಾದ ಮಹಾಭಾರತದ 15 ಕಥೆಗಳನ್ನು ಆಯ್ಕೆಮಾಡಿ, ಆ ಕಥೆಗಳ ಒಳಸುಳಿಯನ್ನು ತೆರೆದಿಡುವ ಪ್ರಯತ್ನ.
ಲೇಖಕ ಜಗದೀಶ ಶರ್ಮರು, ಮಹಾಭಾರತದ ಪ್ರಸಂಗವನ್ನು ಅಪರಾಧ ಮತ್ತು ಶಿಕ್ಷೆಯ ತಳಹದಿಯಲ್ಲಿ ನೋಡುತ್ತಾರೆ. ಮಹಾಭಾರತದಲ್ಲಾದ ಅರೆಕ್ಷಣದ ತಪ್ಪು, ಒಂದು ಅನವಶ್ಯಕ ಛಲ, ಆಕ್ಷಣದ ನಿರರ್ಥಕ ನಿರ್ಧಾರ, ಸೇಡಿನ ಕಿಚ್ಚು…ಹೀಗೆ ಕಾಲದ ಸುರುಳಿಯಲ್ಲಿ ಚಕ್ರತೀರ್ಥದಂತೆ ಸುತ್ತುತ್ತಾ ಸುತ್ತುತ್ತಾ ಅದಕ್ಕೆ ಕಾರಣನಾದ ವ್ಯಕ್ತಿಯನ್ನೇ ಬಲಿತೆಗೆದುಕೊಳ್ಳುತ್ತದೆ ಎಂಬುದನ್ನು, ವ್ಯಾಖ್ಯಾನಗಳ ಮೂಲಕ ಓದುಗರ ಮುಂದಿಟ್ಟಿದ್ದಾರೆ.
©2025 Book Brahma Private Limited.