Date: 24-05-2023
Location: ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು
ಬೆಂಗಳೂರು: ಹಿರಿಯ ಲೇಖಕಿ ಬಿ.ಟಿ ಲಲಿತಾ ನಾಯಕ್, ವಸುಮತಿ ಉಡುಪ, ಪ್ರೊ. ಮಲ್ಲಿಕಾರ್ಜುನ ಹಿರೇಮಠ ಹಾಗೂ ಅಮರೇಶ ನುಗಡೋಣಿ ಅವರು 2022 ಹಾಗೂ 2023ನೇ ಸಾಲಿನ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ.
ಡಾ. ಮನು ಬಳಿಗಾರ್ ಪರಿಷತ್ತಿನ ಅಧ್ಯಕ್ಷರಾಗಿದ್ದಾಗ ಅವರಿಗೆ ನೀಡುತ್ತಿದ್ದ ಮಾಸಿಕ ಗೌರವ ಸಂಭಾವನೆಯನ್ನು ಪರಿಷತ್ತಿನಲ್ಲಿಯೇ ದತ್ತಿ ನಿಧಿ ರೂಪದಲ್ಲಿಟ್ಟು 'ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿ'ಯನ್ನು ಸ್ಥಾಪಿಸಿದ್ದರು. 12,61,000 ( ಹನ್ನೆರಡು ಲಕ್ಷದ ಅರವತ್ತೊಂದು ಸಾವಿರ)ರೂ. ಗಳ ಖಾಯಂ ದತ್ತಿನಿಧಿಯಿಂದ ಈ ಪ್ರಶಸ್ತಿ ಸ್ಥಾಪನೆಗೊಂಡಿದ್ದು, ಪ್ರತಿವರ್ಷ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಒಬ್ಬ ಲೇಖಕ ಹಾಗೂ ಲೇಖಕಿಗೆ ತಲಾ 30,000(ಮೂವತ್ತು ಸಾವಿರ)ರೂ. ನಗದು, ಸ್ಮರಣಿಕೆ, ಹಾರ ಹಾಗೂ ಫಲತಾಂಬೂಲ ನೀಡಿ ಗೌರವಿಸಲಾಗುತ್ತದೆ. ಅದರಂತೆ 2022-2023ನೇ ಸಾಲಿನ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼಗೆ ಹಿರಿಯ ಲೇಖಕಿ ಶ್ರೀಮತಿ ವಸುಮತಿ ಉಡುಪ ಹಾಗೂ ಲೇಖಕ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಅವರನ್ನು ಆಯ್ಕೆ ಮಾಡಲಾಗಿದೆ.
ಇನ್ನು 2023ನೆಯ ಸಾಲಿನ ಪ್ರಶಸ್ತಿಗೆ ಹಿರಿಯ ಲೇಖಕಿ ಡಾ. ಬಿ. ಟಿ. ಲಲಿತಾ ನಾಯಕ್ ಹಾಗೂ ಲೇಖಕ ಡಾ. ಅಮರೇಶ ನುಗಡೋಣಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ, ವಿಮರ್ಶಕಿ ಡಾ. ಎಂ. ಎಸ್. ಆಶಾದೇವಿ, ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀ, ನೇ. ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.
ಸ್ವರ್ಣಿಮ ಭಾರತಿ ಸಾಹಿತ್ಯ ಸಮ್ಮಾನ್ ವತಿಯಿಂದ ಆಯೋಜಿಸಿದ್ದ ‘ವನರಾಗ ಶರ್ಮಾ ಪುಸ್ತಕ ಪ್ರಶಸ್ತಿ’ ಸ್ಪರ್ಧೆಯ...
ಬೆಂಗಳೂರು: ಸಿದ್ಧಾಂತ ಪ್ರಕಾಶನದಿಂದ ಲೇಖಕ ಕವಿ ಜೆ.ಆರ್ ನರಸಿಂಹಮೂರ್ತಿ ರವರ 'ನುಡಿ ನಮನ ' ಕವನ ಸಂಕಲನ ಹಾಗೂ &...
ಮೈಸೂರು ವಿಶ್ವವಿದ್ಯಾಲಯದಿಂದ ''ಸರ್ವೋದಯ ಪರಿಕಲ್ಪನೆಯ ಪ್ರಸ್ತುತತೆ ಮತ್ತು ದುರ್ಬಲ ವರ್ಗಗಳ ಸಬಲೀಕರಣದಲ್ಲಿ ಸ್...
©2023 Book Brahma Private Limited.