Date: 25-01-2023
Location: ಧಾರವಾಡ
ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, 2023ನೇ ಸಾಲಿನ ʻಅಂಬಿಕಾತನಯದತ್ತʼ ರಾಷ್ಟ್ರೀಯ ಪ್ರಶಸ್ತಿಗೆ ನಿವೃತ್ತ ನ್ಯಾಯಾಧೀಶ, ಬೆಳಗಾವಿಯ ಕವಿ ಜಿನದತ್ತ ದೇಸಾಯಿ ಹಾಗೂ ವಿಮರ್ಶಕ ಶಿವಮೊಗ್ಗದ ರಾಜೇಂದ್ರ ಚೆನ್ನಿ ಆಯ್ಕೆಯಾಗಿದ್ದಾರೆ.
ಒಂದು ಲಕ್ಷ ಮೌಲ್ಯದ ಪ್ರಶಸ್ತಿಯನ್ನುಈ ಬಾರಿ ಇಬ್ಬರು ಲೇಖಕರಿಗೆ ಹಂಚಲಾಗಿದೆ. ಪ್ರಶಸ್ತಿಯು ತಲಾ 50 ಸಾವಿರ ರೂ. ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಬೇಂದ್ರೆ ಅವರ 127ನೇ ಜನ್ಮದಿನದ ಸಂದರ್ಭದಲ್ಲಿ ಜನವರಿ 31ರಂದು ಧಾರವಾಡದ ಬೇಂದ್ರೆ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...
ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...
©2024 Book Brahma Private Limited.