ಅಖಿಲ ಭಾರತ ಯುವ ಬರಹಗಾರರ ಹಬ್ಬದಲ್ಲಿ ಕನ್ನಡಿಗ ಆನಂದ್ ಕುಂಚನೂರ

Date: 09-09-2019

Location: ದಿಬ್ರುಗರ್ ವಿಶ್ವಿವಿದ್ಯಾಲಯ, ದಿಬ್ರುಗರ್, ಅಸ್ಸಾಂ


ಕೇಂದ್ರ ಸಾಹಿತ್ಯ ಅಕಾಡೆಮಿ ಆಯೋಜಿಸಿರುವ ಅಖಿಲ ಭಾರತ ಯುವ ಬರಹಗಾರರ ಹಬ್ಬ (All India Young Writer's Festival)ದಲ್ಲಿ ನಡೆಯುವ ಸಣ್ಣ ಕತೆಗಳು ಗೋಷ್ಠಿಯಲ್ಲಿ ಕನ್ನಡದ ಕತೆಗಾರ ಆನಂದ ಕುಂಚನೂರ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಮಾತನಾಡಲಿದ್ದಾರೆ.

ಅಸ್ಸಾಂನ ದಿಬ್ರುಗರ್ ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳ ಕಾಲ ನಡೆಯುವ ಬರಹಗಾರ ಹಬ್ಬದಲ್ಲಿ ಕನ್ನಡದಲ್ಲಿ ಸಣ್ಣಕತೆಗಳು ವಿಷಯದ ಕುರಿತು ಮಾತನಾಡಲಿದ್ದಾರೆ. ಕರ್ನಾಟಕವನ್ನು ಪ್ರತಿನಿಧಿಸಿ ಆನಂದ್ ಕುಂಚನೂರು ಅವರು ಸಣ್ಣ ಕತೆಗಳು ಗೋಷ್ಠಿಯಲ್ಲಿ ಮಾತನಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿ ಶ್ರೀನಿವಾಸರಾವ್, ನಮಿತಾ ಗೋಖಲೆ, ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಚಂದ್ರಶೇಖರ ಕಂಬಾರ ಮುಂತಾದವರು ಭಾಗವಹಿಸಲಿದ್ದಾರೆ. ದೇಶದ ವಿವಿಧ ಭಾಷೆಗಳ ಬರಹಗಾರರು, ಕವಿ-ಕವಯತ್ರಿಯರು ಭಾಗವಹಿಸಲಿದ್ದಾರೆ.

MORE NEWS

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

24-04-2024 ಬೆಂಗಳೂರು

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...