Date: 24-06-2020
Location: ಬೆಂಗಳೂರು
ಭಾಷಾ ವಿಜ್ಞಾನಿ ಡಾ. ಬಿ.ಬಿ. ರಾಜಪುರೋಹಿತ (85) ನಿಧನರಾಗಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ಮೂಲದ ಅವರು ಕನ್ನಡ ಭಾಷೆ ಮತ್ತು ವ್ಯಾಕರಣದಲ್ಲಿ ಅಪಾರ ಪಾಂಡಿತ್ಯವಿದ್ದು, ಭಾರತೀಯ ಭಾಷಾ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು.
ಕನ್ನಡ ವ್ಯಾಕರಣ, ಛಂದಸ್ಸು ಮತ್ತು ಅಲಂಕಾರ; ವಚನ ವ್ಯಾಕರಣ (ವ್ಯಾಕರಣ), ಬೇಂದ್ರೆ ಕಾವ್ಯ ಭಾಷೆ; ಕನ್ನಡವೆಲ್ಲ ಒಂದೇ, ಭಾಷೆ ಮತ್ತು ಅರ್ಥಗಳ ಗುಟ್ಟು; ಧ್ವನಿ ವಿಜ್ಞಾನ; ವ್ಯಾ-ಸಾ-ನು-ಭಾವ; ಧ್ವನಿಯ ಶ್ರಾವಣ ಮತ್ತು ಚಾಕ್ಷುಷ ರೂಪ; ವಚನ ಸಾಹಿತ್ಯದ ಭಾಷಾ ಶೈಲಿ (ಭಾಷಾ ವಿಜ್ಞಾನ). ಏಳು ಬೀಳಿನ ಕಡಲು; ಗಂಗಾವತರಣ; ಬೇಂದ್ರೆ ಕಾವ್ಯ ನಿಘಂಟು ಅವರ ಪ್ರಮುಖ ಕೃತಿಗಳು. ‘A Grammar of Vachana Literature’ ಮಹಾಪ್ರಬಂಧಕ್ಕೆ ಕರ್ನಾಟಕ ವಿ.ವಿ.ಯಿಂದ ಪಿಎಚ್.ಡಿ. ಪಡೆದಿದ್ದರು.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.