Date: 23-10-2020
Location: ಹುಬ್ಬಳ್ಳಿ
ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಹಾಗೂ ಸಾಹಿತ್ಯಿಕ ಕ್ಷೇತ್ರದ ಸಾಧಕರನ್ನು ಗುರುತಿಸಿ ಗದುಗಿನ ಖ್ಯಾತ ಸಾಹಿತಿ ದಿ. ವಿ.ಬಿ. ಹಿರೇಮಠ ಅವರ ಪುಣ್ಯಸ್ಮರಣೆ ಅಂಗವಾಗಿ ಕೊಡಮಾಡುವ ಡಾ. ವಿ. ಬಿ. ಹಿರೇಮಠ ಸದ್ಭಾವನಾ ಸಾಹಿತ್ಯ ಪ್ರಶಸ್ತಿಗೆ ಚಂದ್ರಶೇಖರ ಮಾಡಲಗೇರಿ ಅವರು ಆಯ್ಕೆಯಾಗಿದ್ದಾರೆ. ಸಾಹಿತಿ ಹಾಗೂ ಪ್ರಕಾಶಕರಾಗಿರುವ ಚಂದ್ರಶೇಖರ ಮಾಡಲಗೇರಿ ಅವರು ‘ಮತ್ತೆ ಕಾಡಿದೆ ಮೌನ, ಹನಿಮೂನ್, ಸಂಜೆ ಮಲ್ಲಿಗೆ’ ಕೃತಿಗಳನ್ನು ರಚಿಸಿದ್ದಾರೆ.
ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಕನ್ನಡ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಂಡಿರುವ ಮಾಡಲಗೇರಿ ಅವರಿಗೆ 2020ರ ನವೆಂಬರ್ 3ರಂದು ಗದುಗಿನ ಡಾ. ವಿ ಬಿ ಹಿರೇಮಠ ಪ್ರತಿಷ್ಠಾನದ ಕಛೇರಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರತಿಷ್ಠಾನದ ಅಧ್ಯಕ್ಷ ವಿ. ವಿ. ಹಿರೇಮಠ, ಜಿಲ್ಲೆಯ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಶರಣು ಗೋಗೇರಿ ಹಾಗೂ ಪುಟ್ಟರಾಜ ಹಿರೇಮಠ ಸಮಾರಂಭದಲ್ಲಿ ಉಪಸ್ಥಿತರಿರುವರು ಎಂದು ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...
ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...
ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...
©2024 Book Brahma Private Limited.